ಪುಣೆ: ದೇಶದಲ್ಲಿ ಹೊಸದಾಗಿ ಮಂದಿರ-ಮಸೀದಿಗಳ ವಿವಾದಗಳನ್ನು ಹುಟ್ಟುಹಾಕುತ್ತಿರುವುದಕ್ಕೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಕೆಲವು ವ್ಯಕ್ತಿಗಳು, ಅಯೋಧ್ಯೆಯ ರಾಮಮಂದಿರ ನಿರ್ಮಾಣದ ನಂತರ, ಅಂತಹ ವಿವಾದಗಳನ್ನು ಕೆರಳಿಸುವ ಮೂಲಕ ಹಿಂದುಗಳ ನಾಯಕರಾಗಬಹುದೆಂದು ಭಾವಿಸಿದ್ದಾರೆ. ಆದರೆ, ಅದು ಸ್ವೀಕಾರಾರ್ಹವಲ್ಲ ಎಂದು ಹರಿಹಾಯ್ದಿದ್ದಾರೆ.
ಎಲ್ಲರನ್ನು ಒಳಗೊಳ್ಳುವ ಸಮಾಜದ ಅಗತ್ಯವಿದೆ. ದೇಶವು ಸಾಮರಸ್ಯದಿಂದ ಬದುಕಬಹುದು ಎಂಬುದನ್ನು ಜಗತ್ತಿಗೆ ತೋರಿಸಬೇಕಾಗಿದೆ ಎಂದರು.
ನಾವು ಅನಾದಿ ಕಾಲದಿಂದಲೂ ಬದುಕುತ್ತಿದ್ದೇವೆ. ಈ ಸೌಹಾರ್ದವನ್ನು ನಾವು ಜಗತ್ತಿಗೆ ನೀಡಬೇಕಾದರೆ, ನಾವು ಅದರ ಮಾದರಿಯನ್ನು ರೂಪಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಹಿಂದುಗಳ ನಂಬಿಕೆಯ ವಿಷಯವಾಗಿದ್ದರಿಂದ ರಾಮಮಂದಿರವನ್ನು ನಿರ್ಮಿಸಲಾಗಿದೆ ಎಂದು ಹೇಳಿರುವ ಭಾಗವತ್ ಅವರು, ಪ್ರತಿದಿನ ಹೊಸ ವಿವಾದ ಉದ್ಭವಿಸುತ್ತಿವೆ. ಇದಕ್ಕೆ ಹೇಗೆ ಅನುಮತಿಸುವುದು? ಇಂತಹದ್ದನ್ನು ಮುಂದುವರಿಸಲು ಸಾಧ್ಯವಿಲ್ಲ. ನಾವೆಲ್ಲರೂ ಒಟ್ಟಿಗೆ ಬದುಕಬಲ್ಲೆವು ಎಂಬುದನ್ನು ಭಾರತವು ತೋರಿಸಬೇಕಾಗಿದೆ ಎಂದು ಯಾವುದೇ ನಿರ್ದಿಷ್ಟ ವಿವಾದಿತ ಸ್ಥಳ ಉಲ್ಲೇಖಿಸದೇ ಹೇಳಿದರು.
ಈ ಮೂಲಕ ಮಂದಿರ-ಮಸೀದಿಗಳ ಹೊಸ ವಿವಾದದ ಬಗ್ಗೆ ಮೋಹನ್ ಭಾಗವತ್ ಕಳವಳ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್. ಈಗ ಅವರ ಕುದುರೆಗಳು ಮುಂದೆ ಇವೆ…
ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…
ಕಲಬುರ್ಗಿ: ಇಂದು(ಏಪ್ರಿಲ್.15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…
ಲಕ್ನೋ: ಕರ್ನಾಟಕ ಕಾಂಗ್ರೆಸ್ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…
ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ…
ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…