ಪುಣೆ: ದೇಶದಲ್ಲಿ ಹೊಸದಾಗಿ ಮಂದಿರ-ಮಸೀದಿಗಳ ವಿವಾದಗಳನ್ನು ಹುಟ್ಟುಹಾಕುತ್ತಿರುವುದಕ್ಕೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಕೆಲವು ವ್ಯಕ್ತಿಗಳು, ಅಯೋಧ್ಯೆಯ ರಾಮಮಂದಿರ ನಿರ್ಮಾಣದ ನಂತರ, ಅಂತಹ ವಿವಾದಗಳನ್ನು ಕೆರಳಿಸುವ ಮೂಲಕ ಹಿಂದುಗಳ ನಾಯಕರಾಗಬಹುದೆಂದು ಭಾವಿಸಿದ್ದಾರೆ. ಆದರೆ, ಅದು ಸ್ವೀಕಾರಾರ್ಹವಲ್ಲ ಎಂದು ಹರಿಹಾಯ್ದಿದ್ದಾರೆ.
ಎಲ್ಲರನ್ನು ಒಳಗೊಳ್ಳುವ ಸಮಾಜದ ಅಗತ್ಯವಿದೆ. ದೇಶವು ಸಾಮರಸ್ಯದಿಂದ ಬದುಕಬಹುದು ಎಂಬುದನ್ನು ಜಗತ್ತಿಗೆ ತೋರಿಸಬೇಕಾಗಿದೆ ಎಂದರು.
ನಾವು ಅನಾದಿ ಕಾಲದಿಂದಲೂ ಬದುಕುತ್ತಿದ್ದೇವೆ. ಈ ಸೌಹಾರ್ದವನ್ನು ನಾವು ಜಗತ್ತಿಗೆ ನೀಡಬೇಕಾದರೆ, ನಾವು ಅದರ ಮಾದರಿಯನ್ನು ರೂಪಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಹಿಂದುಗಳ ನಂಬಿಕೆಯ ವಿಷಯವಾಗಿದ್ದರಿಂದ ರಾಮಮಂದಿರವನ್ನು ನಿರ್ಮಿಸಲಾಗಿದೆ ಎಂದು ಹೇಳಿರುವ ಭಾಗವತ್ ಅವರು, ಪ್ರತಿದಿನ ಹೊಸ ವಿವಾದ ಉದ್ಭವಿಸುತ್ತಿವೆ. ಇದಕ್ಕೆ ಹೇಗೆ ಅನುಮತಿಸುವುದು? ಇಂತಹದ್ದನ್ನು ಮುಂದುವರಿಸಲು ಸಾಧ್ಯವಿಲ್ಲ. ನಾವೆಲ್ಲರೂ ಒಟ್ಟಿಗೆ ಬದುಕಬಲ್ಲೆವು ಎಂಬುದನ್ನು ಭಾರತವು ತೋರಿಸಬೇಕಾಗಿದೆ ಎಂದು ಯಾವುದೇ ನಿರ್ದಿಷ್ಟ ವಿವಾದಿತ ಸ್ಥಳ ಉಲ್ಲೇಖಿಸದೇ ಹೇಳಿದರು.
ಈ ಮೂಲಕ ಮಂದಿರ-ಮಸೀದಿಗಳ ಹೊಸ ವಿವಾದದ ಬಗ್ಗೆ ಮೋಹನ್ ಭಾಗವತ್ ಕಳವಳ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…