ದೇಶ- ವಿದೇಶ

ಮಂದಿರ-ಮಸೀದಿಗಳ ಹೊಸ ವಿವಾದ: ಮೋಹನ್ ಭಾಗವತ್‌ ಕಳವಳ

ಪುಣೆ: ದೇಶದಲ್ಲಿ ಹೊಸದಾಗಿ ಮಂದಿರ-ಮಸೀದಿಗಳ ವಿವಾದಗಳನ್ನು ಹುಟ್ಟುಹಾಕುತ್ತಿರುವುದಕ್ಕೆ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಕೆಲವು ವ್ಯಕ್ತಿಗಳು, ಅಯೋಧ್ಯೆಯ ರಾಮಮಂದಿರ ನಿರ್ಮಾಣದ ನಂತರ, ಅಂತಹ ವಿವಾದಗಳನ್ನು ಕೆರಳಿಸುವ ಮೂಲಕ ಹಿಂದುಗಳ ನಾಯಕರಾಗಬಹುದೆಂದು ಭಾವಿಸಿದ್ದಾರೆ. ಆದರೆ, ಅದು ಸ್ವೀಕಾರಾರ್ಹವಲ್ಲ ಎಂದು ಹರಿಹಾಯ್ದಿದ್ದಾರೆ.

ಎಲ್ಲರನ್ನು ಒಳಗೊಳ್ಳುವ ಸಮಾಜದ ಅಗತ್ಯವಿದೆ. ದೇಶವು ಸಾಮರಸ್ಯದಿಂದ ಬದುಕಬಹುದು ಎಂಬುದನ್ನು ಜಗತ್ತಿಗೆ ತೋರಿಸಬೇಕಾಗಿದೆ ಎಂದರು.

ನಾವು ಅನಾದಿ ಕಾಲದಿಂದಲೂ ಬದುಕುತ್ತಿದ್ದೇವೆ. ಈ ಸೌಹಾರ್ದವನ್ನು ನಾವು ಜಗತ್ತಿಗೆ ನೀಡಬೇಕಾದರೆ, ನಾವು ಅದರ ಮಾದರಿಯನ್ನು ರೂಪಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಹಿಂದುಗಳ ನಂಬಿಕೆಯ ವಿಷಯವಾಗಿದ್ದರಿಂದ ರಾಮಮಂದಿರವನ್ನು ನಿರ್ಮಿಸಲಾಗಿದೆ ಎಂದು ಹೇಳಿರುವ ಭಾಗವತ್‌ ಅವರು, ಪ್ರತಿದಿನ ಹೊಸ ವಿವಾದ ಉದ್ಭವಿಸುತ್ತಿವೆ. ಇದಕ್ಕೆ ಹೇಗೆ ಅನುಮತಿಸುವುದು? ಇಂತಹದ್ದನ್ನು ಮುಂದುವರಿಸಲು ಸಾಧ್ಯವಿಲ್ಲ. ನಾವೆಲ್ಲರೂ ಒಟ್ಟಿಗೆ ಬದುಕಬಲ್ಲೆವು ಎಂಬುದನ್ನು ಭಾರತವು ತೋರಿಸಬೇಕಾಗಿದೆ ಎಂದು ಯಾವುದೇ ನಿರ್ದಿಷ್ಟ ವಿವಾದಿತ ಸ್ಥಳ ಉಲ್ಲೇಖಿಸದೇ ಹೇಳಿದರು.

ಈ ಮೂಲಕ ಮಂದಿರ-ಮಸೀದಿಗಳ ಹೊಸ ವಿವಾದದ ಬಗ್ಗೆ ಮೋಹನ್‌ ಭಾಗವತ್‌ ಕಳವಳ ವ್ಯಕ್ತಪಡಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

14 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

14 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

14 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

14 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

14 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

14 hours ago