ಹೊಸದಿಲ್ಲಿ: ಯುವ ಉದ್ಯಮಿ ಜೆರೋಧಾ ಮುಖ್ಯಸ್ಥ ನಿಖಿಲ್ ಕಾಮತ್ ಅವರೊಂದಿಗೆ ತಮ್ಮ ಮೊದಲ ಪಾಡ್ಕ್ಯಾಸ್ಟ್ ನಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಬಾಲ್ಯ, ಶಿಕ್ಷಣ, ರಾಜಕೀಯ ಸೇರಿದಂತೆ ಸಾಕಷ್ಟು ವಿಚಾರಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಈ ವೇಳೆ ಮೋದಿ ಅವರು ತಮ್ಮ ಜೀವನದಲ್ಲಿ ಎದುರಿಸಿದ ಅತಿದೊಡ್ಡ ಸವಾಲುಗಳಲ್ಲಿ ಒಂದಾದ 2002ರ ಗುಜರಾತ್ ಗಲಭೆಯ ಬಗ್ಗೆಯು ಮಾಹಿತಿ ಹಂಚಿಕೊಂಡಿದ್ದಾರೆ.
2002ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದಾಗ, ಮೂರು ದಿನದಲ್ಲಿ ಗೋಧ್ರಾ ಘಟನೆ ನಡೆಯಿತು. ಅದು 2002 ಫೆಬ್ರವರಿ 27, ಅಂದು ರೈಲಿಗೆ ಬೆಂಕಿ ಬಿದ್ದಿದೆ ಎಂದು ಮೊದಲ ಬಾರಿಗೆ ನನಗೆ ಮಾಹಿತಿ ಬಂತು. ಕೆಲ ಹೊತ್ತಿನಲ್ಲಿ ಸಾವುಗಳ ಕುರಿತು ವರದಿ ಬರಲಾರಂಭಿಸಿದವು. ಇದೆಲ್ಲಾ ನಡೆಯುವಾಗ ನಾನು ವಿಧಾನಸಭೆಯ ಒಳಗೆ ಇದ್ದೆ. ಇದೆಲ್ಲಾ ನನಗೆ ಚಿಂತೆ ಉಂಟು ಮಾಡಿತ್ತು ಎಂದು ಮೋದಿ ಹೇಳಿದ್ದಾರೆ.
ತಕ್ಷಣ ವಿಧಾನಸಭೆಯಿಂದ ಹೊರಗೆ ಬಂದು ಗೋಧ್ರಾಗೆ ಭೇಟಿ ನೀಡಬೇಕು ಎಂದು ಹೊರಟೆ. ಆದರೆ ಆವಾಗ ಇದ್ದದ್ದು ಒಂದೇ ಹೆಲಿಕಾಪ್ಟರ್. ಅದು ಸಿಂಗಲ್ ಇಂಜಿನ್ ಆಗಿರುವ ಕಾರಣ, ವಿಐಪಿಗಳು ಪ್ರಯಾಣ ಮಾಡಬಾರದು ಎಂದಿದ್ದರು. ಬಳಿಕ ನಾನು ಮಾತುಕತೆ ನಡೆಸಿ, ಏನಾದರೂ ನಾನೇ ಜವಾಬ್ದಾರಿ ಎಂದು ಅವರಿಗೆ ಹೇಳಿ ಗೋಧ್ರಾಗೆ ಹೆಲಿಕಾಪ್ಟಾರ್ ಹತ್ತಿದೆ.
ಅಲ್ಲಿ ತಲುಪಿದ ಮೇಲೆ ಅಲ್ಲಿನ ಸಾವು ನೋವಿನ ದೃಶ್ಯಗಳು, ಮೃತದೇಹಗಳನ್ನು ನೋಡಿ ಜೀವನದ ಕೆಟ್ಟ ದುಃಖವನ್ನು ಅಲ್ಲಿ ಅನುಭವಿಸಿದೆ ಎಂದಿದ್ದಾರೆ.
ಅಂದು ಅಯೋಧ್ಯಯಿಂದ ಬರುತ್ತಿದ್ದ ಹಿಂದೂ ಭಕ್ತಾದಿಗಳು ಹಾಗೂ ಕರಸೇವಕರಿದ್ದ ಸಾಬರಮತಿ ಎಕ್ಸ್ಪ್ರೆಸ್ ರೈಲಿನ ಎಸ್-6 ಕೋಚ್ಗೆ ಮತಾಂಧರು ಬೆಂಕಿಹಚ್ಚಿದ್ದರು. 59 ಮಂದಿ ಸುಟ್ಟು ಕರಕಲಾಗಿದ್ದರು. ಯಾರೊಬ್ಬರ ಮೃತದೇಹಗಳನ್ನು ಗುರುತಿಸುವ ಸ್ಥಿತಿ ಇರಲಿಲ್ಲ. ಅದು ಘನಘೋರ ಘಟನೆ. ಈ ಬೆನ್ನಲ್ಲೇ ಗುಜರಾತ್ ಇತಿಹಾಸದಲ್ಲಿಯೇ ಕಂಡ ಅತಿದೊಡ್ಡ ಕೋಮುಗಲಭೆ ಉಂಟಾಗಿತ್ತು ಎಂದು ಕೆಲ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…