ಹೊಸದಿಲ್ಲಿ: ಯುವ ಉದ್ಯಮಿ ಜೆರೋಧಾ ಮುಖ್ಯಸ್ಥ ನಿಖಿಲ್ ಕಾಮತ್ ಅವರೊಂದಿಗೆ ತಮ್ಮ ಮೊದಲ ಪಾಡ್ಕ್ಯಾಸ್ಟ್ ನಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಬಾಲ್ಯ, ಶಿಕ್ಷಣ, ರಾಜಕೀಯ ಸೇರಿದಂತೆ ಸಾಕಷ್ಟು ವಿಚಾರಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಈ ವೇಳೆ ಮೋದಿ ಅವರು ತಮ್ಮ ಜೀವನದಲ್ಲಿ ಎದುರಿಸಿದ ಅತಿದೊಡ್ಡ ಸವಾಲುಗಳಲ್ಲಿ ಒಂದಾದ 2002ರ ಗುಜರಾತ್ ಗಲಭೆಯ ಬಗ್ಗೆಯು ಮಾಹಿತಿ ಹಂಚಿಕೊಂಡಿದ್ದಾರೆ.
2002ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದಾಗ, ಮೂರು ದಿನದಲ್ಲಿ ಗೋಧ್ರಾ ಘಟನೆ ನಡೆಯಿತು. ಅದು 2002 ಫೆಬ್ರವರಿ 27, ಅಂದು ರೈಲಿಗೆ ಬೆಂಕಿ ಬಿದ್ದಿದೆ ಎಂದು ಮೊದಲ ಬಾರಿಗೆ ನನಗೆ ಮಾಹಿತಿ ಬಂತು. ಕೆಲ ಹೊತ್ತಿನಲ್ಲಿ ಸಾವುಗಳ ಕುರಿತು ವರದಿ ಬರಲಾರಂಭಿಸಿದವು. ಇದೆಲ್ಲಾ ನಡೆಯುವಾಗ ನಾನು ವಿಧಾನಸಭೆಯ ಒಳಗೆ ಇದ್ದೆ. ಇದೆಲ್ಲಾ ನನಗೆ ಚಿಂತೆ ಉಂಟು ಮಾಡಿತ್ತು ಎಂದು ಮೋದಿ ಹೇಳಿದ್ದಾರೆ.
ತಕ್ಷಣ ವಿಧಾನಸಭೆಯಿಂದ ಹೊರಗೆ ಬಂದು ಗೋಧ್ರಾಗೆ ಭೇಟಿ ನೀಡಬೇಕು ಎಂದು ಹೊರಟೆ. ಆದರೆ ಆವಾಗ ಇದ್ದದ್ದು ಒಂದೇ ಹೆಲಿಕಾಪ್ಟರ್. ಅದು ಸಿಂಗಲ್ ಇಂಜಿನ್ ಆಗಿರುವ ಕಾರಣ, ವಿಐಪಿಗಳು ಪ್ರಯಾಣ ಮಾಡಬಾರದು ಎಂದಿದ್ದರು. ಬಳಿಕ ನಾನು ಮಾತುಕತೆ ನಡೆಸಿ, ಏನಾದರೂ ನಾನೇ ಜವಾಬ್ದಾರಿ ಎಂದು ಅವರಿಗೆ ಹೇಳಿ ಗೋಧ್ರಾಗೆ ಹೆಲಿಕಾಪ್ಟಾರ್ ಹತ್ತಿದೆ.
ಅಲ್ಲಿ ತಲುಪಿದ ಮೇಲೆ ಅಲ್ಲಿನ ಸಾವು ನೋವಿನ ದೃಶ್ಯಗಳು, ಮೃತದೇಹಗಳನ್ನು ನೋಡಿ ಜೀವನದ ಕೆಟ್ಟ ದುಃಖವನ್ನು ಅಲ್ಲಿ ಅನುಭವಿಸಿದೆ ಎಂದಿದ್ದಾರೆ.
ಅಂದು ಅಯೋಧ್ಯಯಿಂದ ಬರುತ್ತಿದ್ದ ಹಿಂದೂ ಭಕ್ತಾದಿಗಳು ಹಾಗೂ ಕರಸೇವಕರಿದ್ದ ಸಾಬರಮತಿ ಎಕ್ಸ್ಪ್ರೆಸ್ ರೈಲಿನ ಎಸ್-6 ಕೋಚ್ಗೆ ಮತಾಂಧರು ಬೆಂಕಿಹಚ್ಚಿದ್ದರು. 59 ಮಂದಿ ಸುಟ್ಟು ಕರಕಲಾಗಿದ್ದರು. ಯಾರೊಬ್ಬರ ಮೃತದೇಹಗಳನ್ನು ಗುರುತಿಸುವ ಸ್ಥಿತಿ ಇರಲಿಲ್ಲ. ಅದು ಘನಘೋರ ಘಟನೆ. ಈ ಬೆನ್ನಲ್ಲೇ ಗುಜರಾತ್ ಇತಿಹಾಸದಲ್ಲಿಯೇ ಕಂಡ ಅತಿದೊಡ್ಡ ಕೋಮುಗಲಭೆ ಉಂಟಾಗಿತ್ತು ಎಂದು ಕೆಲ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ ಇರಾನ್ ಮಿಲಿಟರಿ ಪಡೆಗಳು ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ…
ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ. ಈ ಬಗ್ಗೆ…
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ನಡೆಯುವ…
ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…
ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…