ದೇಶ- ವಿದೇಶ

ನಿಖಿಲ್‌ ಕಾಮತ್‌ ಪಾಡ್‌ ಕಾಸ್ಟ್‌ | 2002ರಲ್ಲಿ ಗೋಧ್ರಾ ರೈಲಿಗೆ ಬೆಂಕಿ ಹಚ್ಚಿದ ಬಗ್ಗೆ ಮೋದಿ ಮಾತು….

ಹೊಸದಿಲ್ಲಿ: ಯುವ ಉದ್ಯಮಿ ಜೆರೋಧಾ ಮುಖ್ಯಸ್ಥ ನಿಖಿಲ್‌ ಕಾಮತ್‌ ಅವರೊಂದಿಗೆ ತಮ್ಮ ಮೊದಲ ಪಾಡ್‌ಕ್ಯಾಸ್ಟ್ ನಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಬಾಲ್ಯ, ಶಿಕ್ಷಣ, ರಾಜಕೀಯ ಸೇರಿದಂತೆ ಸಾಕಷ್ಟು ವಿಚಾರಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಈ ವೇಳೆ ಮೋದಿ ಅವರು ತಮ್ಮ ಜೀವನದಲ್ಲಿ ಎದುರಿಸಿದ ಅತಿದೊಡ್ಡ ಸವಾಲುಗಳಲ್ಲಿ ಒಂದಾದ 2002ರ ಗುಜರಾತ್‌ ಗಲಭೆಯ ಬಗ್ಗೆಯು ಮಾಹಿತಿ ಹಂಚಿಕೊಂಡಿದ್ದಾರೆ.

2002ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದಾಗ, ಮೂರು ದಿನದಲ್ಲಿ ಗೋಧ್ರಾ ಘಟನೆ ನಡೆಯಿತು. ಅದು 2002 ಫೆಬ್ರವರಿ 27, ಅಂದು ರೈಲಿಗೆ ಬೆಂಕಿ ಬಿದ್ದಿದೆ ಎಂದು ಮೊದಲ ಬಾರಿಗೆ ನನಗೆ ಮಾಹಿತಿ ಬಂತು. ಕೆಲ ಹೊತ್ತಿನಲ್ಲಿ ಸಾವುಗಳ ಕುರಿತು ವರದಿ ಬರಲಾರಂಭಿಸಿದವು. ಇದೆಲ್ಲಾ ನಡೆಯುವಾಗ ನಾನು ವಿಧಾನಸಭೆಯ ಒಳಗೆ ಇದ್ದೆ. ಇದೆಲ್ಲಾ ನನಗೆ ಚಿಂತೆ ಉಂಟು ಮಾಡಿತ್ತು ಎಂದು ಮೋದಿ ಹೇಳಿದ್ದಾರೆ.

ತಕ್ಷಣ ವಿಧಾನಸಭೆಯಿಂದ ಹೊರಗೆ ಬಂದು ಗೋಧ್ರಾಗೆ ಭೇಟಿ ನೀಡಬೇಕು ಎಂದು ಹೊರಟೆ. ಆದರೆ ಆವಾಗ ಇದ್ದದ್ದು ಒಂದೇ ಹೆಲಿಕಾಪ್ಟರ್.‌ ಅದು ಸಿಂಗಲ್‌ ಇಂಜಿನ್‌ ಆಗಿರುವ ಕಾರಣ, ವಿಐಪಿಗಳು ಪ್ರಯಾಣ ಮಾಡಬಾರದು ಎಂದಿದ್ದರು. ಬಳಿಕ ನಾನು ಮಾತುಕತೆ ನಡೆಸಿ, ಏನಾದರೂ ನಾನೇ ಜವಾಬ್ದಾರಿ ಎಂದು ಅವರಿಗೆ ಹೇಳಿ ಗೋಧ್ರಾಗೆ ಹೆಲಿಕಾಪ್ಟಾರ್‌ ಹತ್ತಿದೆ.

ಅಲ್ಲಿ ತಲುಪಿದ ಮೇಲೆ ಅಲ್ಲಿನ ಸಾವು ನೋವಿನ ದೃಶ್ಯಗಳು, ಮೃತದೇಹಗಳನ್ನು ನೋಡಿ ಜೀವನದ ಕೆಟ್ಟ ದುಃಖವನ್ನು ಅಲ್ಲಿ ಅನುಭವಿಸಿದೆ ಎಂದಿದ್ದಾರೆ.

ಅಂದು ಅಯೋಧ್ಯಯಿಂದ ಬರುತ್ತಿದ್ದ ಹಿಂದೂ ಭಕ್ತಾದಿಗಳು ಹಾಗೂ ಕರಸೇವಕರಿದ್ದ ಸಾಬರಮತಿ ಎಕ್ಸ್‌ಪ್ರೆಸ್‌ ರೈಲಿನ ಎಸ್‌-6 ಕೋಚ್‌ಗೆ ಮತಾಂಧರು ಬೆಂಕಿಹಚ್ಚಿದ್ದರು. 59 ಮಂದಿ ಸುಟ್ಟು ಕರಕಲಾಗಿದ್ದರು. ಯಾರೊಬ್ಬರ ಮೃತದೇಹಗಳನ್ನು ಗುರುತಿಸುವ ಸ್ಥಿತಿ ಇರಲಿಲ್ಲ. ಅದು ಘನಘೋರ ಘಟನೆ. ಈ ಬೆನ್ನಲ್ಲೇ ಗುಜರಾತ್‌ ಇತಿಹಾಸದಲ್ಲಿಯೇ ಕಂಡ ಅತಿದೊಡ್ಡ ಕೋಮುಗಲಭೆ ಉಂಟಾಗಿತ್ತು ಎಂದು ಕೆಲ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

6 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

9 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

13 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

15 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

16 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

17 hours ago