ನವದೆಹಲಿ: ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ಬೆಳವಣಿಗೆಗೆ ಮೊದಲ ಆದ್ಯತೆ. ಪಕ್ಷದ ಬೆಳವಣಿಗೆಯಲ್ಲಿ ಕಾರ್ಯ ನಿರ್ವಹಿಸುವ ಪ್ರತಿಯೊಬ್ಬ ಕಾರ್ಯಕರ್ತನಿಗೂ ಆತ್ಮ ವಿಶ್ವಾಸ ತುಂಬುವ ನಿಟ್ಟಿನಲ್ಲಿ ನಾನು ಕೂಡ ಅವರ ಹಾಗೇ ಕೆಲಸ ಮಾಡುತ್ತಿದ್ದೇನೆ. ಪಕ್ಷದ ಚೌಕಟ್ಟಿನಲ್ಲಿ ಏನೇ ತೀರ್ಮಾನ ಆದರು ಅದನ್ನು ಪಾಲಿಸಲು ಸಿದ್ಧನಿದ್ದೇನೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ರಾಜ್ಯಾಧ್ಯಕ್ಷ ಹುದ್ದೆ ಆಯ್ಕೆ ಸಂಬಂಧ ದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಯಾವುದೇ ಹುದ್ದೆಯ ಆಸೆಯಿಲ್ಲ. ನನಗಿಂತ ಹಿರಿಯರಿದ್ದಾರೆ. ತಂದೆಯವರಾದ ಎಚ್.ಡಿ.ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ನಾನು ಪಕ್ಷ ಸಂಘಟನೆ ಕಾರ್ಯ ಮಾಡುತ್ತೇನೆ. ಪಕ್ಷಕ್ಕೆ ಸಾವಿರ ಕಾರ್ಯಕರ್ತರನ್ನು ಹುಟ್ಟುಹಾಕುವ ಶಕ್ತಿ ಇದೆ. ಹೀಗಾಗಿ ಪಕ್ಷದ ತೀರ್ಮಾನವೇ ಅಂತಿಮ ಎಂದರು.
ಉಪಚುನಾವಣೆ ಸೋಲಿನಿಂದ ನಾನು ಹತಾಶನಾಗಿಲ್ಲ. ಈಗಲೂ ನಾನು ಪ್ರತಿನಿಧಿಸಿದ ಕ್ಷೇತ್ರದ ರೈತರ ತಂಬಾಕು ಬೆಳೆಗಳ ಸಮಸ್ಯೆ ನಿವಾರಿಸಲು ದೆಹಲಿಗೆ ಬಂದಿದ್ದೇನೆ. ಈ ಕುರಿತು ಗೃಹ ಸಚಿವ ಅಮಿತ್ ಶಾ, ಉಸ್ತುವಾರಿ ರಾಧಾ ಮೋಹನ್ ದಾಸ್, ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಭೇಟಿ ಮಾಡಿ ರಾಜ್ಯದಲ್ಲಿ ಮೈತ್ರಿ ಬಲಪಡಿಸುವ ಬಗ್ಗೆ, ಸ್ಥಳೀಯ ಚುನಾವಣೆ ಒಟ್ಟಾಗಿ ಎದುರಿಸುವ ಬಗ್ಗೆ ಚರ್ಚೆ ಮಾಡಿದ್ದೇನೆ ಎಂದರು.
ಇನ್ನು ಹಾಸನದಲ್ಲಿ ಕಾಂಗ್ರೆಸ್ ಜನಕಲ್ಯಾಣ ಸಮಾವೇಶದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಸಮಾವೇಶದಿಂದ ಜನರಿಗೆ ಏನಾದರು ಉಪಯೋಗವಾಗಿದೇಯೋ? ಅವರು ಮಾಡಿರುವ ಹಗರಣಗಳನ್ನು ಮುಚ್ಚಿಹಾಕಲು ಇಂತದ ಸಮಾವೇಶ ಮಾಡಿ ಜನರ ತೆರಿಗೆ ದುಡ್ಡನ್ನು ಪೋಲು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಮಾವೇಶದಿಂದ ಎಚ್.ಡಿ.ದೇವೇಗೌಡರ ಕುಟುಂಬ ನಿಂದಿಸಿ ರಾಜಕೀಯವಾಗಿ ದುರ್ಬಲ ಮಾಡಲು ಹೊರಟಿದ್ದಾರೆ. ಇದರಿಂದ ನಾವು ಎದೆಗುಂದುವುದಿಲ್ಲ. ಮಂಡ್ಯದಲ್ಲಿ ನಾವು ಪಕ್ಷ ಸಂಘಟನೆ ಮತ್ತು ಜನರನ್ನು ಒಗ್ಗೂಡಿಸುವುದಕ್ಕಾಗಿ ಸಮಾವೇಶ ಮಾಡಬೇಕಾಯಿತು. ಆದರೆ ಕುಮಾರಸ್ವಾಮಿಯವರು ಸಂಸತ್ನ ಅಧಿವೇಶನದಲ್ಲಿ ಬ್ಯುಸಿಯಾಗಿರುವುದರಿಂದ ಸಮಾವೇಶವನ್ನು ಮುಂದೂಡಿಕೆ ಮಾಡಲಾಗಿದೆ ಎಂದರು.
ಉಪಚುನಾವಣೆಯಲ್ಲಿ 87,000 ಸಾವಿರ ಮತಗಳನ್ನು ಪಡೆದು ಸೋತಿದ್ದೇನೆ. ಇದು ಸೋಲಲ್ಲ. ಜನತೆ ಕ್ಷೇತ್ರದ ನಾಡಿಮಿಡಿತ ಅರಿಯಲು ನೀಡಿರುವ ಮತ್ತೊಂದು ಅವಕಾಶ ಎಂದು ಹೇಳಿದರು.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…