ದೇಶ- ವಿದೇಶ

ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ನಿಖಿಲ್‌ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ

ನವದೆಹಲಿ: ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ಬೆಳವಣಿಗೆಗೆ ಮೊದಲ ಆದ್ಯತೆ. ಪಕ್ಷದ ಬೆಳವಣಿಗೆಯಲ್ಲಿ ಕಾರ್ಯ ನಿರ್ವಹಿಸುವ ಪ್ರತಿಯೊಬ್ಬ ಕಾರ್ಯಕರ್ತನಿಗೂ ಆತ್ಮ ವಿಶ್ವಾಸ ತುಂಬುವ ನಿಟ್ಟಿನಲ್ಲಿ ನಾನು ಕೂಡ ಅವರ ಹಾಗೇ ಕೆಲಸ ಮಾಡುತ್ತಿದ್ದೇನೆ. ಪಕ್ಷದ ಚೌಕಟ್ಟಿನಲ್ಲಿ ಏನೇ ತೀರ್ಮಾನ ಆದರು ಅದನ್ನು ಪಾಲಿಸಲು ಸಿದ್ಧನಿದ್ದೇನೆ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯಾಧ್ಯಕ್ಷ ಹುದ್ದೆ ಆಯ್ಕೆ ಸಂಬಂಧ ದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಯಾವುದೇ ಹುದ್ದೆಯ ಆಸೆಯಿಲ್ಲ. ನನಗಿಂತ ಹಿರಿಯರಿದ್ದಾರೆ. ತಂದೆಯವರಾದ ಎಚ್‌.ಡಿ.ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ನಾನು ಪಕ್ಷ ಸಂಘಟನೆ ಕಾರ್ಯ ಮಾಡುತ್ತೇನೆ. ಪಕ್ಷಕ್ಕೆ ಸಾವಿರ ಕಾರ್ಯಕರ್ತರನ್ನು ಹುಟ್ಟುಹಾಕುವ ಶಕ್ತಿ ಇದೆ. ಹೀಗಾಗಿ ಪಕ್ಷದ ತೀರ್ಮಾನವೇ ಅಂತಿಮ ಎಂದರು.

ಉಪಚುನಾವಣೆ ಸೋಲಿನಿಂದ ನಾನು ಹತಾಶನಾಗಿಲ್ಲ. ಈಗಲೂ ನಾನು ಪ್ರತಿನಿಧಿಸಿದ ಕ್ಷೇತ್ರದ ರೈತರ ತಂಬಾಕು ಬೆಳೆಗಳ ಸಮಸ್ಯೆ ನಿವಾರಿಸಲು ದೆಹಲಿಗೆ ಬಂದಿದ್ದೇನೆ. ಈ ಕುರಿತು ಗೃಹ ಸಚಿವ ಅಮಿತ್‌ ಶಾ, ಉಸ್ತುವಾರಿ ರಾಧಾ ಮೋಹನ್‌ ದಾಸ್, ಸಂಘಟನಾ‌ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌ ಭೇಟಿ ಮಾಡಿ ರಾಜ್ಯದಲ್ಲಿ ಮೈತ್ರಿ ಬಲಪಡಿಸುವ ಬಗ್ಗೆ, ಸ್ಥಳೀಯ ಚುನಾವಣೆ ಒಟ್ಟಾಗಿ ಎದುರಿಸುವ ಬಗ್ಗೆ ಚರ್ಚೆ ಮಾಡಿದ್ದೇನೆ ಎಂದರು.

ಇನ್ನು ಹಾಸನದಲ್ಲಿ ಕಾಂಗ್ರೆಸ್‌ ಜನಕಲ್ಯಾಣ ಸಮಾವೇಶದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಸಮಾವೇಶದಿಂದ ಜನರಿಗೆ ಏನಾದರು ಉಪಯೋಗವಾಗಿದೇಯೋ? ಅವರು ಮಾಡಿರುವ ಹಗರಣಗಳನ್ನು ಮುಚ್ಚಿಹಾಕಲು ಇಂತದ ಸಮಾವೇಶ ಮಾಡಿ ಜನರ ತೆರಿಗೆ ದುಡ್ಡನ್ನು ಪೋಲು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಮಾವೇಶದಿಂದ ಎಚ್‌.ಡಿ.ದೇವೇಗೌಡರ ಕುಟುಂಬ ನಿಂದಿಸಿ ರಾಜಕೀಯವಾಗಿ ದುರ್ಬಲ ಮಾಡಲು ಹೊರಟಿದ್ದಾರೆ. ಇದರಿಂದ ನಾವು ಎದೆಗುಂದುವುದಿಲ್ಲ. ಮಂಡ್ಯದಲ್ಲಿ ನಾವು ಪಕ್ಷ ಸಂಘಟನೆ ಮತ್ತು ಜನರನ್ನು ಒಗ್ಗೂಡಿಸುವುದಕ್ಕಾಗಿ ಸಮಾವೇಶ ಮಾಡಬೇಕಾಯಿತು. ಆದರೆ ಕುಮಾರಸ್ವಾಮಿಯವರು ಸಂಸತ್‌ನ ಅಧಿವೇಶನದಲ್ಲಿ ಬ್ಯುಸಿಯಾಗಿರುವುದರಿಂದ ಸಮಾವೇಶವನ್ನು ಮುಂದೂಡಿಕೆ ಮಾಡಲಾಗಿದೆ ಎಂದರು.

ಉಪಚುನಾವಣೆಯಲ್ಲಿ 87,000 ಸಾವಿರ ಮತಗಳನ್ನು ಪಡೆದು ಸೋತಿದ್ದೇನೆ. ಇದು ಸೋಲಲ್ಲ. ಜನತೆ ಕ್ಷೇತ್ರದ ನಾಡಿಮಿಡಿತ ಅರಿಯಲು ನೀಡಿರುವ ಮತ್ತೊಂದು ಅವಕಾಶ ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

2 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

2 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

4 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

4 hours ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

8 hours ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

8 hours ago