ದೇಶ- ವಿದೇಶ

ಬಿ.ಎಲ್‌.ಸಂತೋಷ್‌ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ

ನವದೆಹಲಿ: ಜನತಾ ದಳದ ಯುವ ಮುಖಂಡ ನಿಖಿಲ್‌ ಕುಮಾರಸ್ವಾಮಿ ಅವರು, ಉಪಚುನಾವಣೆಯ ಬಳಿಕ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.‌ ಸಂತೋಷ್‌ ಅವರನ್ನು ಭೇಟಿ ಮಾತುಕತೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರ ಜೀವನ ಕುರಿತಾದ ‘furrows in a field: the unexplored life of H.D.Devegowda’ ಗ್ರಂಥವನ್ನು ಬಿ.ಎಲ್.ಸಂತೋಷ್‌ ಅವರಿಗೆ ನೀಡಿದರು.

ಚನ್ನಪಟ್ಟಣದ ಸೋಲಿನ ಬಳಿಕ ರಾಜ್ಯ ರಾಜಕೀಯದ ಬೆಳವಣಿಗೆ ಕುರಿತು ನಿಖಿಲ್‌ ಕುಮಾರಸ್ವಾಮಿ ಅವರು ಕೆಲವು ಪ್ರಮುಖ ಅಂಶಗಳನ್ನು ಸಂತೋಷ್‌ ಅವರೊಂದಿಗೆ ಹಂಚಿಕೊಂಡರು. ಈ ವೇಳೆ ನಿಖಿಲ್‌ ಅವರ ಮುಂದಿನ ರಾಜಕೀಯ ಜೀವನ ನಡೆ ಕುರಿತು ಬಿ.ಎಲ್‌.ಸಂತೋಷ್ ಅವರು ಕೆಲವು ಮಹತ್ವದ‌ ಸಲಹೆ ಹಾಗೂ ಮಾರ್ಗದರ್ಶನ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬಿ.ಎಲ್‌. ಸಂತೋಷ್‌ ಭೇಟಿ ಮಾಡಿದ ವಿಚಾರದ ಬಗ್ಗೆ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ, ದೆಹಲಿಯಲ್ಲಿ ಸಂತೋ಼ಷ್‌ ಜಿ ಅವರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದುಕೊಂಡು, ಚನ್ನಪಟ್ಟಣ ಚುನಾವಣೆ ವಿಷಯವಾಗಿ ಕೆಲ ಮಾಹಿತಿ ಕೇಳಿ ಪಡೆದರು. ಮುಂದೆ ಎನ್‌ಡಿಎ ಮೈತ್ರಿಕೂಟವನ್ನು ರಾಜ್ಯದಾದ್ಯಂತ ಬಲಪಡಿಸುವ ನಿಟ್ಟಿನಲ್ಲಿ ನನಗೆ ಮಾರ್ಗದರ್ಶನ ಕೊಟ್ಟರು ಎಂದು ಮಾಹಿತಿ ನೀಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

2 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

2 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

4 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

4 hours ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

8 hours ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

8 hours ago