ನವದೆಹಲಿ: ಯುವ ಜನತಾದಳ ರಾಜ್ಯ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಕರ್ನಾಟಕದಲ್ಲಿ ಎನ್ಡಿಎ ಮೈತ್ರಿಕೂಟವನ್ನು ಮತ್ತಷ್ಟು ಬಲವರ್ಧನೆ ಮಾಡುವ ದೃಷ್ಟಿಯಿಂದ ಅಮಿತ್ ಶಾ ಅವರಿಂದ ಮಾರ್ಗದರ್ಶನ ಪಡೆದರು.
ಈ ಬಗ್ಗೆ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ನಿಖಿಲ್ ಕುಮಾರಸ್ವಾಮಿ ಅವರು, ಕೇಂದ್ರ ಸಚಿವ ಅಮಿತ್ ಶಾ ಅವರ ಪ್ರೀತಿ, ವಿಶ್ವಾಸ, ವಾತ್ಸಲ್ಯಕ್ಕೆ ನಾನು ಕೃತಜ್ಞನಾಗಿದ್ದೇನೆ.
ಅಮಿತ್ ಶಾ ಜೀ ಅವರ ಸಂಘಟನಾ ಚತುರತೆ, ನಾಯಕತ್ವ ಗುಣಗಳು ನನ್ನನ್ನು ಒಳಗೊಂಡಂತೆ ಅಸಂಖ್ಯಾತ ಯುವ ಜನರಿಗೆ ಪ್ರೇರಣಾದಾಯಕ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಇನ್ನು ನಿಖಿಲ್ ಕುಮಾರಸ್ವಾಮಿ ಅವರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸೋತರು ಧೃತಿಗೆಡದೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ.
ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಹಲವು ಎನ್ಡಿಎ ನಾಯಕರನ್ನು ಭೇಟಿ ಮಾಡಿರುವ ಅವರು, ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಬೇಕಾದ ಎಲ್ಲಾ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.
ಬಿಡದಿ : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಗದ್ದಲ–ಗಲಾಟೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಸರ್ಕಾರದ ನಿರ್ಧಾರಕ್ಕೆ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದು, ಜಮೀನು…
ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…
ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್ನಿಂದ ನೋಟಿಸ್…
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…