ನವದೆಹಲಿ: ಯುವ ಜನತಾದಳ ರಾಜ್ಯ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಕರ್ನಾಟಕದಲ್ಲಿ ಎನ್ಡಿಎ ಮೈತ್ರಿಕೂಟವನ್ನು ಮತ್ತಷ್ಟು ಬಲವರ್ಧನೆ ಮಾಡುವ ದೃಷ್ಟಿಯಿಂದ ಅಮಿತ್ ಶಾ ಅವರಿಂದ ಮಾರ್ಗದರ್ಶನ ಪಡೆದರು.
ಈ ಬಗ್ಗೆ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ನಿಖಿಲ್ ಕುಮಾರಸ್ವಾಮಿ ಅವರು, ಕೇಂದ್ರ ಸಚಿವ ಅಮಿತ್ ಶಾ ಅವರ ಪ್ರೀತಿ, ವಿಶ್ವಾಸ, ವಾತ್ಸಲ್ಯಕ್ಕೆ ನಾನು ಕೃತಜ್ಞನಾಗಿದ್ದೇನೆ.
ಅಮಿತ್ ಶಾ ಜೀ ಅವರ ಸಂಘಟನಾ ಚತುರತೆ, ನಾಯಕತ್ವ ಗುಣಗಳು ನನ್ನನ್ನು ಒಳಗೊಂಡಂತೆ ಅಸಂಖ್ಯಾತ ಯುವ ಜನರಿಗೆ ಪ್ರೇರಣಾದಾಯಕ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಇನ್ನು ನಿಖಿಲ್ ಕುಮಾರಸ್ವಾಮಿ ಅವರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸೋತರು ಧೃತಿಗೆಡದೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ.
ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಹಲವು ಎನ್ಡಿಎ ನಾಯಕರನ್ನು ಭೇಟಿ ಮಾಡಿರುವ ಅವರು, ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಬೇಕಾದ ಎಲ್ಲಾ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…