ದೇಶ- ವಿದೇಶ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿಯಾದ ನಿಖಿಲ್‌ ಕುಮಾರಸ್ವಾಮಿ

ನವದೆಹಲಿ: ಯುವ ಜನತಾದಳ ರಾಜ್ಯ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರಿಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಕರ್ನಾಟಕದಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ಮತ್ತಷ್ಟು ಬಲವರ್ಧನೆ ಮಾಡುವ ದೃಷ್ಟಿಯಿಂದ ಅಮಿತ್‌ ಶಾ ಅವರಿಂದ ಮಾರ್ಗದರ್ಶನ ಪಡೆದರು.

ಈ ಬಗ್ಗೆ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿರುವ ನಿಖಿಲ್‌ ಕುಮಾರಸ್ವಾಮಿ ಅವರು, ಕೇಂದ್ರ ಸಚಿವ ಅಮಿತ್‌ ಶಾ ಅವರ ಪ್ರೀತಿ, ವಿಶ್ವಾಸ, ವಾತ್ಸಲ್ಯಕ್ಕೆ ನಾನು ಕೃತಜ್ಞನಾಗಿದ್ದೇನೆ.

ಅಮಿತ್‌ ಶಾ ಜೀ ಅವರ ಸಂಘಟನಾ ಚತುರತೆ, ನಾಯಕತ್ವ ಗುಣಗಳು ನನ್ನನ್ನು ಒಳಗೊಂಡಂತೆ ಅಸಂಖ್ಯಾತ ಯುವ ಜನರಿಗೆ ಪ್ರೇರಣಾದಾಯಕ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನು ನಿಖಿಲ್‌ ಕುಮಾರಸ್ವಾಮಿ ಅವರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸೋತರು ಧೃತಿಗೆಡದೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ.

ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಹಲವು ಎನ್‌ಡಿಎ ನಾಯಕರನ್ನು ಭೇಟಿ ಮಾಡಿರುವ ಅವರು, ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಬೇಕಾದ ಎಲ್ಲಾ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

2 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

2 hours ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

2 hours ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

3 hours ago