ದೇಶ- ವಿದೇಶ

ಧಾರ್ಮಿಕ ಪ್ರವಾಸೋದ್ಯಮಕ್ಕೆ ಬಜೆಟ್ ನಲ್ಲಿ ಒತ್ತು

ನವದೆಹಲಿ : ಈ ಬಾರಿಯ ಬಜೆಟ್‌ ನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡುವುದಾಗಿ ಹಣಕಾಸು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಣೆ ಮಾಡಿದ್ದಾರೆ.

ಲೋಕಸಭೆಯಲ್ಲಿ ತಮ್ಮ ೭ನೇ ಬಜೆಟ್‌ ಮಂಡಿಸಿದ ನಿರ್ಮಾಲಾ ಸೀತಾರಾಮನ್‌, ಗಯಾವನ್ನು ಕಾಶಿ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಬಿಹಾರದ ರಾಜಗಿರಿ ಜೈನ ಮಂದಿರದ ಅಭಿವೃದ್ಧಿಗೆ ಸಮಗ್ರ ಯೋಜನೆ ಸಿದ್ಧಪಡಿಸಲಾಗುವುದು ಎಂದು ಘೋಷಣೆ ಮಾಡಿದರು.

ಧಾರ್ಮಿಕ ಪ್ರವಾಸೋದ್ಯಮವನ್ನು ಹೆಚ್ಚಿಸಲು ಸರ್ಕಾರ ಕ್ರಮಗಳನ್ನ ಪ್ರಕಟಿಸಿದೆ. ಬಿಹಾರ ಒಡಿಸಾದ ಪ್ರವಾಸೋದ್ಯಮದ ಮೇಲೆ ಕೇಂದ್ರೀಕರಿಸಲಾಗಿದೆ. ಆರ್ಥಿಕತೆಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಲವಾರು ಕ್ರಮಗಳನ್ನು ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಪ್ರವಾಸೋದ್ಯಮವು ಯಾವಾಗಲೂ ನಮ್ಮ ನಾಗರೀಕತೆಯ ಭಾಗವಾಗಿದೆ. ಭಾರತವನ್ನು ಜಾಗತಿಕ ಪ್ರವಾಸಿ ತಾಣವಾಗಿಸುವ ಪ್ರಯತ್ನಗಳು ಆರ್ಥಿಕ ಅವಕಾಶಗಳನ್ನು ಸೃಷ್ಠಿಸುತ್ತವೆ ಎಂದು ಹೇಳಿದರು.

ಅಲ್ಲದೆ ನಳಂದವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು. ನಳಂದ ವಿಶ್ವವಿದ್ಯಾನಿಲಯವನ್ನು ಪುನರುಜ್ಜೀವನಗೊಳಿಸುವುದರ ಜೊತೆಗೆ ನಳಂದವನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುವುದು. ಬಿಹಾರದ ವಿಷ್ಣುಪಾದ ದೇವಸ್ಥಾನ ಕಾರಿಡರ್‌ ಮತ್ತು ಮಹಾಬೋಧಿ ದೇವಸ್ಥಾನ ಕಾರಿಡಾರ್‌ ಅನ್ನು ಸರ್ಕಾರ ಅಭಿವೃದ್ಧಿಪಡಿಸಲಿದೆ. ಈ ತಾಣ ಅಪಾರ ಧಾರ್ಮಿಕ ಪ್ರಾಮುಖ್ಯತೆಯನ್ನು ಹೊಂದಿದೆ. ಕಾಶಿ ವಿಶ್ವನಾಥ ಕಾರಿಡಾರ್‌ ನ ಮಾದರಿಯಲ್ಲಿ ಅವುಗಳನ್ನ ವಿಶ್ವದರ್ಜೆಯ ಪ್ರವಾಸಿ ತಾಣಗಳಾಗಿ ಪರಿವರ್ತಿಸಲಾಗುವುದು. ಒಡಿಶಾದ ರಮಣೀಯ ಸೌಂದರ್ಯ ದೇವಾಲಯಗಳು ವನ್ಯಜೀವಿ ಮತ್ತು ಇತರ ವೈಶಿಷ್ಟ್ಯಗಳ ಮೂಲಕ ಅದನ್ನು ಪ್ರವಾಸಿ ತಾಣವನ್ನಾಗಿ ಮಾಡುತ್ತದೆ ಎಂದು ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಮೈಸೂರು: ಕೆಮಿಕಲ್‌ ಘಟಕದ ಮೇಲೆ ದೆಹಲಿ ಪೊಲೀಸರ ದಾಳಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್‌ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್‌ಗಳನ್ನು…

26 mins ago

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

4 hours ago

ಓದುಗರ ಪತ್ರ: ವಿವೇಕಾನಂದ ಪ್ರತಿಮೆ ಅನಾವರಣಗೊಳಿಸಿ

ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…

4 hours ago

ಓದುಗರ ಪತ್ರ: ಮಲ್ಲಯ್ಯನ ಬೆಟ್ಟ ಅಭಿವೃದ್ಧಿಗೊಳಿಸಿ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…

4 hours ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…

4 hours ago

ಓದುಗರ ಪತ್ರ: ರಥೋತ್ಸವ: ಮುನ್ನೆಚ್ಚರಿಕೆ ಅಗತ್ಯ

ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…

4 hours ago