ನವದೆಹಲಿ: 2024ರ ಲೋಕಸಭಾ ಚುನಾವಣೆ ವೇಳೆಯಲ್ಲಿ ರಾಜಕೀಯ ನಾಯಕರೊಬ್ಬರು ನನ್ನನ್ನು ಪ್ರಧಾನಿ ಹುದ್ದೆಗೆ ಬೆಂಬಲಿಸುವ ಭರವಸೆ ನೀಡಿದ್ದರು, ಅದನ್ನು ನಾನು ತಿರಸ್ಕಾರ ಮಾಡಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಈ ಬಗ್ಗೆ ನಾಗ್ಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಅಂದು ನಡೆದ ಘಟನೆ ನನಗೆ ಈಗಲೂ ನೆನಪಿದೆ. ಅವರ ಹೆಸರನ್ನು ನಾನು ಬಹಿರಂಗಪಡಿಸಲ್ಲ. ದೇಶದ ಪ್ರಧಾನಿಯಾಗುವುದು ನನ್ನ ಗುರಿಯಲ್ಲ. ಅಂತಹ ಮಹತ್ವಾಕಾಂಕ್ಷೆಯನ್ನು ನಾನು ಹೊಂದಿಲ್ಲ ಎಂದು ಖಡಕ್ ಆಗಿ ಹೇಳಿದರು.
ನಾನು ನನ್ನ ನಂಬಿಕೆಗಳಿಗೆ ಮತ್ತು ಸಂಘಟನೆಗೆ ನಿಷ್ಠನಾಗಿದ್ದೇನೆ. ಯಾವುದೇ ಹುದ್ದೆಗಾಗಿ ನನ್ನ ತತ್ವಗಳಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಈ ಮೂಲಕ ಮೋದಿ ನಂತರ ಪ್ರಧಾನಿಯಾಗಲು ನಿತಿನ್ ಗಡ್ಕರಿ 3ನೇ ಸ್ಥಾನದಲ್ಲಿದ್ದಾರೆ ಎಂದು ಸಮೀಕ್ಷೆಯೊಂದು ಬಹಿರಂಗಪಡಿಸಿತ್ತು. ಇದೆಕ್ಕೆಲ್ಲಾ ನಿತಿನ್ ಗಡ್ಕರಿ ಅಂತ್ಯ ಹಾಡಿದ್ದಾರೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…