ಪಾಟ್ನಾ: ಮುಂದಿನ ವಾರ ಬಿಹಾರಕ್ಕೆ ಹೊಸ ಮುಖ್ಯಮಂತ್ರಿ ಆಯ್ಕೆಯಾಗುವ ಸಾಧ್ಯತೆ ಇದ್ದು, ನಾಳೆ ನಿತೀಶ್ ಕುಮಾರ್ ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.
ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಸಭಾಪತಿ ರಾಧಾಕೃಷ್ಣನ್ ಅವರು ನಿತೀಶ್ ಕುಮಾರ್ ಅವರಿಗೆ ಪ್ರಮಾಣವಚನ ಬೋಧನ ಮಾಡಲಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಅಧಿಕಾರ ಪರಿವರ್ತನೆಗೆ ನಾಂದಿ ಹಾಡಲಿದ್ದಾರೆ.
ಪ್ರಮಾಣ ವಚನ ಸ್ವೀಕರಿಸಿದ ನಂತರ ನಿತೀಶ್ ಕುಮಾರ್ ಅದೇ ದಿನ ಪಾಟ್ನಾಗೆ ಹಿಂತಿರುಗಲಿದ್ದಾರೆ. ಮುಂದಿನ ಉತ್ತರಾಧಿಕಾರಿಯನ್ನು ಚರ್ಚಿಸಲು ಏಪ್ರಿಲ್.13ರಿಂದ ಬಿಹಾರ ಸಚಿವ ಸಂಪುಟ ಸಭೆಯನ್ನು ನಿಗದಿಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿಗಳು ಮರುದಿನ (ಏಪ್ರಿಲ್ 14) ರಾಜೀನಾಮೆ ನೀಡುವ ಸಾಧ್ಯತೆಯಿದೆ. ಅದೇ ದಿನ, ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡಲು ಎಲ್ಲಾ ಮೈತ್ರಿಕೂಟದ ಪಾಲುದಾರರ ಹಾಗೂ ಎನ್ ಡಿಎ ಶಾಸಕಾಂಗ ಪಕ್ಷದ ಸಭೆಗಳು ನಡೆಯುವ ಸಾಧ್ಯತೆಯಿದೆ.
ಏಪ್ರಿಲ್ 15 ರಂದು ಬಿಹಾರದ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದ್ದು, ಪಾಟ್ನಾದ ಗಾಂಧಿ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವ ನಿರೀಕ್ಷೆಯಿದೆ.
ಹಾಲಿ ಉಪ ಮುಖ್ಯಮಂತ್ರಿ ಸಮರ್ಥ ಚೌಧರಿ ಅವರು ಬಿಹಾರದ ನೂತನ ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ವದಂತಿ ಹಬ್ಬಿದೆ. ಕಳೆದ ತಿಂಗಳು ಜೆಡಿ(ಯು) ಸೇರಿದ ಕುಮಾರ್ ಅವರ ಪುತ್ರ ನಿಶಾಂತ್ ಅವರನ್ನು ಹೊಸ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ನೇಮಿಸುವ ಸಾಧ್ಯತೆ ಇದೆ ಎಂಬ ಊಹಾಪೋಹಗಳು ಕೇಳಿ ಬಂದಿವೆ.
ನವದೆಹಲಿ: ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ…
ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ…
ಬೆಂಗಳೂರು: ರಾಜ್ಯಕ್ಕೆ ಜೂನ್.5ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ…
ವಾಷಿಂಗ್ಟನ್: ದೂರವಾಣಿ ಸಂಭಾಷಣೆ ವೇಳೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಆಕ್ರೋಶ…
ಟಿ.ಕೆ.ಹರೀಶ್ (ಲೇಖಕರು ಹಿರಿಯ ಸಹಾಯಕ ನಿರ್ದೇಶಕರು) ಬಾಲ್ಯದಿಂದಲೇ ಶಿಕ್ಷಣದ ಜೊತೆಗೆ ಪರಿಸರ ಜಾಗೃತಿ ಮೂಡಿಸಬೇಕು ಮೈಸೂರು ತನ್ನದೇ ಆದ ಸುಂದರವಾದ…