ಮುಂಬೈ: ದೇಶದ ಮೊದಲ ಎಲೆಕ್ಟ್ರಿಕ್ ಡಬಲ್ ಡೆಕ್ಕರ್ ಹವಾನಿಯಂತ್ರಿತ ಬಸ್ ಅನ್ನು ಸಾರಿಗೆ ಮತ್ತು ಹೆದ್ದಾರಿಗಳ ಕೇಂದ್ರ ಸಚಿವ ನಿತಿನ್ ಗಡ್ಕರಿ ಗುರುವಾರ ಮುಂಬೈನಲ್ಲಿ ಅನಾವರಣಗೊಳಿಸಿದರು. ಬೃಹನ್ಮುಂಬೈ ಎಲೆಕ್ಟ್ರಿಕ್ ಸಪ್ಲೈ ಅಂಡ್ ಟ್ರಾನ್ಸ್ಪೋರ್ಟ್ ಈ ಎಲೆಕ್ಟ್ರಿಕ್ ಡಬಲ್ ಡೆಕ್ಕರ್ ಹವಾನಿಯಂತ್ರಿತ ಬಸ್ನ ಮೊದಲ ಬಸ್ ಅನ್ನು ಪರಿಚಯಿಸಿದೆ. ಇನ್ನುಳಿದ ಬಸ್ ಗಳು 2023 ರ ಮಧ್ಯಭಾಗದಲ್ಲಿ ರಸ್ತೆಗಿಳಿಯಲಿವೆ ಎಂದು ಮಾಧ್ಯಮ ವರದಿಗಳು ಹೇಳಿವೆ. ಬಸ್ ಗೆ ಚಾಲನೆ ನೀಡಿರುವುದರ ಬಗ್ಗೆ ಟ್ವೀಟ್ ಮಾಡಿದ ಗಡ್ಕರಿ, ಸುಸ್ಥಿರ ಕ್ರಾಂತಿಯ ಆರಂಭ, ಇಂದು ಮುಂಬೈನಲ್ಲಿ ಅಶೋಕ್ ಲೇಲ್ಯಾಂಡ್ನ ಎಲೆಕ್ಟ್ರಿಕ್ ಡಬಲ್ ಡೆಕ್ಕರ್ ಬಸ್ಗೆ ಚಾಲನೆ ನೀಡಿದ್ದು ನನಗೆ ಅಪಾರ ಸಂತೋಷವನ್ನು ನೀಡಿದೆ ಎಂದು ಹೇಳಿದ್ದಾರೆ. ಈ ಕಾರ್ಯವು ಆತ್ಮನಿರ್ಭರ್ ಭಾರತ್ನ ದೃಷ್ಟಿಯನ್ನು ಎತ್ತಿಹಿಡಿಯುತ್ತದೆ ಮತ್ತು ಸುಸ್ಥಿರ ಮತ್ತು ಕಡಿಮೆ ವೆಚ್ಚದ ಪರಿಹಾರಗಳನ್ನು ನೀಡುತ್ತದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಸುಸ್ಥಿರ ಸಾರಿಗೆ ಕ್ಷೇತ್ರಕ್ಕೆ ಕ್ರಿಯಾತ್ಮಕ ಉತ್ತೇಜನವನ್ನು ನೀಡುವುದು, ಅಂತಹ ಉಪಕ್ರಮಗಳು ಕಡಿಮೆ ವೆಚ್ಚದ ಪರಿಹಾರಗಳಾಗಿವೆ. ತೈಲ ಆಮದುಗಳನ್ನು ಕಡಿತಗೊಳಿಸುವುದರ ಮೂಲಕ ಮತ್ತು ಸ್ಥಳೀಯ ಸಂಪನ್ಮೂಲಗಳು ಮತ್ತು ಸೇವೆಗಳನ್ನು ಉತ್ತೇಜಿಸುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆತ್ಮನಿರ್ಭರ್ ದೃಷ್ಟಿಕೋನವನ್ನು ಸಾಧಿಸುತ್ತವೆ ಎಂದು ಗಡ್ಕರಿ ಹೇಳಿದ್ದಾರೆ.
ಈ ಎಲೆಕ್ಟ್ರಿಕಲ್ ಬಸ್ ಗಳನ್ನು ಸ್ವಿಚ್ ಮೊಬಿಲಿಟಿ ಮತ್ತು ಅಶೋಕ್ ಲೇಲ್ಯಾಂಡ್ನ ಎಲೆಕ್ಟ್ರಿಕ್ ವೆಹಿಕಲ್ ವಿಭಾಗ ನಿರ್ಮಾಣ ಮಾಡಿದೆ. ವರದಿಯ ಪ್ರಕಾರ ಈ ಬಸ್ ನಲ್ಲಿ ಎರಡು ಪಟ್ಟು ಹೆಚ್ಚು ಪ್ರಯಾಣಿಕರು ಪ್ರಯಾಣಿಸಬಹುದು.
ಹಂತ ಹಂತವಾಗಿ 900 ಎಲೆಕ್ಟ್ರಿಕ್ ಬಸ್ಗಳ ಪೂರೈಕೆಗಾಗಿ ಕಂಪನಿಯು ಬೆಸ್ಟ್ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಇವುಗಳಲ್ಲಿ, 50 ಪ್ರತಿಶತದಷ್ಟು ಬಸ್ಗಳನ್ನು ಮಾರ್ಚ್ 2023 ರೊಳಗೆ ಮತ್ತು ಉಳಿದ ಶೇಕಡಾ 50 ರಷ್ಟು ನಂತರ ವಿತರಿಸಲಾಗುವುದು ಎಂದು ನಿರೀಕ್ಷಿಸಲಾಗಿದೆ.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…