ಮುಂಬೈ: ದೇಶದ ಮೊದಲ ಎಲೆಕ್ಟ್ರಿಕ್ ಡಬಲ್ ಡೆಕ್ಕರ್ ಹವಾನಿಯಂತ್ರಿತ ಬಸ್ ಅನ್ನು ಸಾರಿಗೆ ಮತ್ತು ಹೆದ್ದಾರಿಗಳ ಕೇಂದ್ರ ಸಚಿವ ನಿತಿನ್ ಗಡ್ಕರಿ ಗುರುವಾರ ಮುಂಬೈನಲ್ಲಿ ಅನಾವರಣಗೊಳಿಸಿದರು. ಬೃಹನ್ಮುಂಬೈ ಎಲೆಕ್ಟ್ರಿಕ್ ಸಪ್ಲೈ ಅಂಡ್ ಟ್ರಾನ್ಸ್ಪೋರ್ಟ್ ಈ ಎಲೆಕ್ಟ್ರಿಕ್ ಡಬಲ್ ಡೆಕ್ಕರ್ ಹವಾನಿಯಂತ್ರಿತ ಬಸ್ನ ಮೊದಲ ಬಸ್ ಅನ್ನು ಪರಿಚಯಿಸಿದೆ. ಇನ್ನುಳಿದ ಬಸ್ ಗಳು 2023 ರ ಮಧ್ಯಭಾಗದಲ್ಲಿ ರಸ್ತೆಗಿಳಿಯಲಿವೆ ಎಂದು ಮಾಧ್ಯಮ ವರದಿಗಳು ಹೇಳಿವೆ. ಬಸ್ ಗೆ ಚಾಲನೆ ನೀಡಿರುವುದರ ಬಗ್ಗೆ ಟ್ವೀಟ್ ಮಾಡಿದ ಗಡ್ಕರಿ, ಸುಸ್ಥಿರ ಕ್ರಾಂತಿಯ ಆರಂಭ, ಇಂದು ಮುಂಬೈನಲ್ಲಿ ಅಶೋಕ್ ಲೇಲ್ಯಾಂಡ್ನ ಎಲೆಕ್ಟ್ರಿಕ್ ಡಬಲ್ ಡೆಕ್ಕರ್ ಬಸ್ಗೆ ಚಾಲನೆ ನೀಡಿದ್ದು ನನಗೆ ಅಪಾರ ಸಂತೋಷವನ್ನು ನೀಡಿದೆ ಎಂದು ಹೇಳಿದ್ದಾರೆ. ಈ ಕಾರ್ಯವು ಆತ್ಮನಿರ್ಭರ್ ಭಾರತ್ನ ದೃಷ್ಟಿಯನ್ನು ಎತ್ತಿಹಿಡಿಯುತ್ತದೆ ಮತ್ತು ಸುಸ್ಥಿರ ಮತ್ತು ಕಡಿಮೆ ವೆಚ್ಚದ ಪರಿಹಾರಗಳನ್ನು ನೀಡುತ್ತದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಸುಸ್ಥಿರ ಸಾರಿಗೆ ಕ್ಷೇತ್ರಕ್ಕೆ ಕ್ರಿಯಾತ್ಮಕ ಉತ್ತೇಜನವನ್ನು ನೀಡುವುದು, ಅಂತಹ ಉಪಕ್ರಮಗಳು ಕಡಿಮೆ ವೆಚ್ಚದ ಪರಿಹಾರಗಳಾಗಿವೆ. ತೈಲ ಆಮದುಗಳನ್ನು ಕಡಿತಗೊಳಿಸುವುದರ ಮೂಲಕ ಮತ್ತು ಸ್ಥಳೀಯ ಸಂಪನ್ಮೂಲಗಳು ಮತ್ತು ಸೇವೆಗಳನ್ನು ಉತ್ತೇಜಿಸುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆತ್ಮನಿರ್ಭರ್ ದೃಷ್ಟಿಕೋನವನ್ನು ಸಾಧಿಸುತ್ತವೆ ಎಂದು ಗಡ್ಕರಿ ಹೇಳಿದ್ದಾರೆ.
ಈ ಎಲೆಕ್ಟ್ರಿಕಲ್ ಬಸ್ ಗಳನ್ನು ಸ್ವಿಚ್ ಮೊಬಿಲಿಟಿ ಮತ್ತು ಅಶೋಕ್ ಲೇಲ್ಯಾಂಡ್ನ ಎಲೆಕ್ಟ್ರಿಕ್ ವೆಹಿಕಲ್ ವಿಭಾಗ ನಿರ್ಮಾಣ ಮಾಡಿದೆ. ವರದಿಯ ಪ್ರಕಾರ ಈ ಬಸ್ ನಲ್ಲಿ ಎರಡು ಪಟ್ಟು ಹೆಚ್ಚು ಪ್ರಯಾಣಿಕರು ಪ್ರಯಾಣಿಸಬಹುದು.
ಹಂತ ಹಂತವಾಗಿ 900 ಎಲೆಕ್ಟ್ರಿಕ್ ಬಸ್ಗಳ ಪೂರೈಕೆಗಾಗಿ ಕಂಪನಿಯು ಬೆಸ್ಟ್ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಇವುಗಳಲ್ಲಿ, 50 ಪ್ರತಿಶತದಷ್ಟು ಬಸ್ಗಳನ್ನು ಮಾರ್ಚ್ 2023 ರೊಳಗೆ ಮತ್ತು ಉಳಿದ ಶೇಕಡಾ 50 ರಷ್ಟು ನಂತರ ವಿತರಿಸಲಾಗುವುದು ಎಂದು ನಿರೀಕ್ಷಿಸಲಾಗಿದೆ.
ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷದಲ್ಲಿ ಹೊರ್ಮುಜ್ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…
ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…
ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ…
ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…