ದೇಶ- ವಿದೇಶ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್‌ ನಬಿನ್‌ ಅಧಿಕಾರ ಸ್ವೀಕಾರ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ನಿತಿನ್ ನಬಿನ್ ಅವರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಹರ್ಷೋದ್ಘಾರದ ನಡುವೆ ಇಂದು ವಿದ್ಯುಕ್ತವಾಗಿ ಅಧಿಕಾರ ಸ್ವೀಕರಿಸಿದರು.

ಬಿಜೆಪಿ ಇತಿಹಾಸದಲ್ಲೇ ಅತಿ ಚಿಕ್ಕ ವಯಸ್ಸಿನಲ್ಲೇ ಪಕ್ಷದ ಅತ್ಯುನ್ನತ ಹುದ್ದೆಯಾದ ರಾಷ್ಟ್ರಾಧ್ಯಕ್ಷ ಸ್ಥಾನವನ್ನು ಅಲಂಕರಿಸಿ ಕೀರ್ತಿಗೆ ಪಾತ್ರರಾಗಿದ್ದಾರೆ. ಜೊತೆಗೆ ಕೇಂದ್ರದ ಹಾಲಿ ಸಚಿವ ನಿತಿನ್ ಗಡ್ಕರಿ ಅವರ ಹೆಸರಿನಲ್ಲಿ ಇದ್ದ ದಾಖಲೆಯನ್ನು ಮುರಿದಿದ್ದಾರೆ.

ನವದೆಹಲಿಯಲ್ಲಿರುವ ದೀನ್ ದಯಾಳ್ ಉಪಾಧ್ಯಾಯ್ ಮಾರ್ಗದಲ್ಲಿರುವ ಪಕ್ಷದ ಮುಖ್ಯ ಕಚೇರಿಯಲ್ಲಿ ನಿರ್ಗಮಿತ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಷಾ ಸೇರಿದಂತೆ ಹಲವರ ಸಮುಖದಲ್ಲಿ ನಬಿನ್ ಕುರ್ಚಿ ಅಲಂಕರಿಸುವ ಮೂಲಕ ಅಧಿಕಾರ ವಹಿಸಿಕೊಂಡರು.

ನಿರ್ಗಮಿತ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡುತ್ತಿದ್ದಂತೆ ವೇದಿಕೆಯ ಮುಂಭಾಗದಲ್ಲಿದ್ದ ಪ್ರಮುಖರು ಹಾಗೂ ಕಚೇರಿ ಹೊರಭಾಗದಲ್ಲಿದ್ದ ಕಾರ್ಯಕರ್ತರು ಜೈಕಾರ ಹಾಕಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಪಕ್ಷದೊಳಗೆ ಅವರ ಉನ್ನತ ಸ್ಥಾನಮಾನವನ್ನು ಗುರುತಿಸಲು ಪ್ರಧಾನಿ ನರೇಂದ್ರ ಮೋದಿ, ನಿತಿನ್ ನಬಿನ್ ಅವರನ್ನು ಸನಾನಿಸಿದರು.

ಬಿಜೆಪಿ ನೂತನ ಅಧ್ಯಕ್ಷರ ಔಪಚಾರಿಕ ಘೋಷಣೆಯಿಂದ ವಾರಗಳ ಕಾಲ ನಡೆದ ಆಂತರಿಕ ಚರ್ಚೆಗಳಿಗೆ ತೆರೆಬಿದ್ದಿದೆ. ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳದಂತಹ ನಿರ್ಣಾಯಕ ರಾಜ್ಯಗಳು ಈ ವರ್ಷದ ಕೊನೆಯಲ್ಲಿ ಹೊಸ ಸರ್ಕಾರಕ್ಕೆ ಮತ ಚಲಾಯಿಸಲು ಸಜ್ಜಾಗಿರುವುದರಿಂದ ಪಕ್ಷವು ನೂತನ ಅಧ್ಯಕ್ಷರನ್ನು ಮುನ್ನೆಲೆಗೆ ತಂದು ಚುನಾವಣಾ ಅಖಾಡಕ್ಕಿಳಿಯಲು ಮುಂದಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

9 mins ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

11 mins ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

12 mins ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

3 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

3 hours ago