ಪಾಟ್ನಾ : ಪ್ರಚಂಡ ಬಹುಮತ ಪಡೆದು ಪ್ರತಿಪಕ್ಷಗಳನ್ನು ಧೂಳಿಪಟ ಮಾಡಿ ಬಿಹಾರದಲ್ಲಿ ಅಧಿಕಾರಕ್ಕೆ ಬಂದಿರುವ ಎನ್ಡಿಎ ನ.೧೯ ಇಲ್ಲವೇ ೨೦ರಂದು ಅಧಿಕೃತವಾಗಿ ಸರ್ಕಾರ ರಚನೆ ಮಾಡಲಿದೆ. ಈ ಮಧ್ಯೆ ಮುಖ್ಯಮಂತ್ರಿ ಸ್ಥಾನಕ್ಕೆ ತೀವ್ರ ಕಿರಿಕಿರಿ ಮಾಡಿಕೊಳ್ಳದೆ ನಿತೀಶ್ ಕುವಾರ್ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಲು ಬಿಜೆಪಿ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಂತಿಮ ವೇಳಾಪಟ್ಟಿಯನ್ನು ಅವಲಂಬಿಸಿ, ಪ್ರಮಾಣವಚನ ಸ್ವೀಕಾರ ಸವಾರಂಭದ ದಿನಾಂಕ ನಿಗದಿಯಾಗಲಿದೆ. ಪಾಟ್ನಾ ಗಾಂಧಿ ಮೈದಾನದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಈ ಸಮಾರಂಭದಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸುವ ಸಾಧ್ಯತೆಯಿದೆ.
ಚುನಾವಣಾ ಆಯೋಗವು ೧೮ನೇ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರಿಗೆ ಸಲ್ಲಿಸಿದೆ. ಇದರ ನಂತರ, ಹೊಸ ವಿಧಾನಸಭೆಯನ್ನು ರಚಿಸುವ ಅಧಿಸೂಚನೆ ಹೊರಡಿಸಲಾಗುವುದು. ಇದರೊಂದಿಗೆ, ಮಾದರಿ ನೀತಿ ಸಂಹಿತೆ ಅಧಿಕೃತವಾಗಿ ಅಂತ್ಯಗೊಳ್ಳಲಿದೆ.
ಇದನ್ನು ಓದಿ: ನವೆಂಬರ್.19 ಅಥವಾ 20ರಂದು ಬಿಹಾರದಲ್ಲಿ ಅಧಿಕೃತ ಸರ್ಕಾರ ರಚನೆ
ಸೋಮವಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯಪಾಲ ಅರೀಫ್ ಮೊಹಮದ್ ಖಾನ್ ಅವರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಬಳಿಕ ಎನ್ಡಿಎ ಬೆಂಬಲಿತ ಶಾಸಕರ ಪತ್ರಗಳನ್ನು ರಾಜ್ಯಪಾಲರಿಗೆ ನೀಡಲಿದ್ದು, ಸರ್ಕಾರ ರಚನೆಗೆ ಅವಕಾಶ ನೀಡಬೇಕೆಂದು ಹಕ್ಕು ಮಂಡಿಸಲಿದ್ದಾರೆ.
ವಿಧಾನಸಭೆಯನ್ನು ವಿಸರ್ಜನೆಗೊಳಿಸಿದ ನಂತರ ರಾಜ್ಯಪಾಲರು ಸರ್ಕಾರ ರಚನೆಗೆ ಅಧಿಕೃತವಾಗಿ ಆಹ್ವಾನ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ನಿತೀಶ್ ಕುಮಾರ್ ರಾಜೀನಾಮೆ ನೀಡಿದ ನಂತರ ಶಾಸಕಾಂಗ ಸಭೆ ನಡೆಯಲಿದ್ದು, ಅಲ್ಲಿ ಎಲ್ಲಾ ಶಾಸಕರು ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಿದ್ದು, ಬಳಿಕ ಮತ್ತೊಮ್ಮೆ ಸರ್ಕಾರ ರಚನೆಗೆ ಹಕ್ಕು ಮಂಡಿಸುವರು.
೧೮ನೇ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್ಡಿಎ ಸ್ಪಷ್ಟ ಬಹುಮತ ಗಳಿಸಿದೆ. ಬಿಜೆಪಿ ೮೯ ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ನಿತೀಶ್ ಕುಮಾರ್ ಅವರ ಸಂಯುಕ್ತ ಜನತಾ ದಳ ೮೫ ಸ್ಥಾನಗಳನ್ನು ಪಡೆದು ಎರಡನೇ ಸ್ಥಾನದಲ್ಲಿದೆ. ಎಲ್ಜೆಪಿ ೧೯ ಸ್ಥಾನ, ಎಚ್ಎಎಂ ೫ ಸ್ಥಾನ, ಮತ್ತು ರಾಷ್ಟ್ರೀುಯ ಲೋಕ ಮೋರ್ಚಾ ೪ ಸ್ಥಾನಗಳನ್ನು ಗೆದ್ದಿವೆ. ಮಹಾಘಟಬಂಧನ್ ಕೇವಲ ೩೫ ಸ್ಥಾನಗಳನ್ನು ಮಾತ್ರ ಪಡೆಯಲು ಶಕ್ತವಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…
ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…
ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…
ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…