ದೇಶ- ವಿದೇಶ

ನಿತೀಶ್ ಕುಮಾರ್‌ಗೆ ಬಿಹಾರದ ಸಾರಥ್ಯ? : ನ.20ರಂದು ಪ್ರಮಾಣ ವಚನ ಸ್ವೀಕಾರ

ಪಾಟ್ನಾ : ಪ್ರಚಂಡ ಬಹುಮತ ಪಡೆದು ಪ್ರತಿಪಕ್ಷಗಳನ್ನು ಧೂಳಿಪಟ ಮಾಡಿ ಬಿಹಾರದಲ್ಲಿ ಅಧಿಕಾರಕ್ಕೆ ಬಂದಿರುವ ಎನ್‌ಡಿಎ ನ.೧೯ ಇಲ್ಲವೇ ೨೦ರಂದು ಅಧಿಕೃತವಾಗಿ ಸರ್ಕಾರ ರಚನೆ ಮಾಡಲಿದೆ. ಈ ಮಧ್ಯೆ ಮುಖ್ಯಮಂತ್ರಿ ಸ್ಥಾನಕ್ಕೆ ತೀವ್ರ ಕಿರಿಕಿರಿ ಮಾಡಿಕೊಳ್ಳದೆ ನಿತೀಶ್ ಕುವಾರ್ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಲು ಬಿಜೆಪಿ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಂತಿಮ ವೇಳಾಪಟ್ಟಿಯನ್ನು ಅವಲಂಬಿಸಿ, ಪ್ರಮಾಣವಚನ ಸ್ವೀಕಾರ ಸವಾರಂಭದ ದಿನಾಂಕ ನಿಗದಿಯಾಗಲಿದೆ. ಪಾಟ್ನಾ ಗಾಂಧಿ ಮೈದಾನದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಈ ಸಮಾರಂಭದಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸುವ ಸಾಧ್ಯತೆಯಿದೆ.

ಚುನಾವಣಾ ಆಯೋಗವು ೧೮ನೇ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರಿಗೆ ಸಲ್ಲಿಸಿದೆ. ಇದರ ನಂತರ, ಹೊಸ ವಿಧಾನಸಭೆಯನ್ನು ರಚಿಸುವ ಅಧಿಸೂಚನೆ ಹೊರಡಿಸಲಾಗುವುದು. ಇದರೊಂದಿಗೆ, ಮಾದರಿ ನೀತಿ ಸಂಹಿತೆ ಅಧಿಕೃತವಾಗಿ ಅಂತ್ಯಗೊಳ್ಳಲಿದೆ.

ಇದನ್ನು ಓದಿ: ನವೆಂಬರ್.‌19 ಅಥವಾ 20ರಂದು ಬಿಹಾರದಲ್ಲಿ ಅಧಿಕೃತ ಸರ್ಕಾರ ರಚನೆ

ಸೋಮವಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯಪಾಲ ಅರೀಫ್ ಮೊಹಮದ್ ಖಾನ್ ಅವರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಬಳಿಕ ಎನ್‌ಡಿಎ ಬೆಂಬಲಿತ ಶಾಸಕರ ಪತ್ರಗಳನ್ನು ರಾಜ್ಯಪಾಲರಿಗೆ ನೀಡಲಿದ್ದು, ಸರ್ಕಾರ ರಚನೆಗೆ ಅವಕಾಶ ನೀಡಬೇಕೆಂದು ಹಕ್ಕು ಮಂಡಿಸಲಿದ್ದಾರೆ.
ವಿಧಾನಸಭೆಯನ್ನು ವಿಸರ್ಜನೆಗೊಳಿಸಿದ ನಂತರ ರಾಜ್ಯಪಾಲರು ಸರ್ಕಾರ ರಚನೆಗೆ ಅಧಿಕೃತವಾಗಿ ಆಹ್ವಾನ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ನಿತೀಶ್ ಕುಮಾರ್ ರಾಜೀನಾಮೆ ನೀಡಿದ ನಂತರ ಶಾಸಕಾಂಗ ಸಭೆ ನಡೆಯಲಿದ್ದು, ಅಲ್ಲಿ ಎಲ್ಲಾ ಶಾಸಕರು ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಿದ್ದು, ಬಳಿಕ ಮತ್ತೊಮ್ಮೆ ಸರ್ಕಾರ ರಚನೆಗೆ ಹಕ್ಕು ಮಂಡಿಸುವರು.

೧೮ನೇ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಸ್ಪಷ್ಟ ಬಹುಮತ ಗಳಿಸಿದೆ. ಬಿಜೆಪಿ ೮೯ ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ನಿತೀಶ್ ಕುಮಾರ್ ಅವರ ಸಂಯುಕ್ತ ಜನತಾ ದಳ ೮೫ ಸ್ಥಾನಗಳನ್ನು ಪಡೆದು ಎರಡನೇ ಸ್ಥಾನದಲ್ಲಿದೆ. ಎಲ್‌ಜೆಪಿ ೧೯ ಸ್ಥಾನ, ಎಚ್‌ಎಎಂ ೫ ಸ್ಥಾನ, ಮತ್ತು ರಾಷ್ಟ್ರೀುಯ ಲೋಕ ಮೋರ್ಚಾ ೪ ಸ್ಥಾನಗಳನ್ನು ಗೆದ್ದಿವೆ. ಮಹಾಘಟಬಂಧನ್ ಕೇವಲ ೩೫ ಸ್ಥಾನಗಳನ್ನು ಮಾತ್ರ ಪಡೆಯಲು ಶಕ್ತವಾಗಿದೆ.

ಆಂದೋಲನ ಡೆಸ್ಕ್

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

14 mins ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

46 mins ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

1 hour ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

4 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

5 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

5 hours ago