ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ.
ಈಗಾಗಲೇ ಈ ಬಗ್ಗೆ ಅನೇಕ ಟೋಲ್ ಪ್ಲಾಜಾಗಳಲ್ಲಿ, ಪ್ರಮುಖ ಹೆದ್ದಾರಿಗಳಲ್ಲಿ ಸಾರ್ವಜನಿಕ ಪ್ರಕಟಣೆಯ ಫಲಕಗಳನ್ನು ಹಾಕಲಾಗಿದೆ.
ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಪ್ರಯಾಣವನ್ನು ಸುಗಮಗೊಳಿಸುವ ಉದ್ದೇಶದಿಂದ ಪ್ರಯಾಣಿಕರು ಟೋಲ್ಗಳನ್ನು ಪಾವತಿಸಲು ಫಾಸ್ಟ್ಟ್ಯಾಗ್ ಅಥವಾ ಯುಪಿಐ ಅನ್ನು ಬಳಸಬೇಕಾಗುತ್ತದೆ. ಈ ಕ್ರಮವು ದೀರ್ಘ ಸರತಿ ಸಾಲುಗಳನ್ನು ನಿವಾರಿಸುತ್ತದೆ ಮತ್ತು ಪ್ರಯಾಣವನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ.
ಮೈಸೂರು-ಬೆಂಗಳೂರು ಹೆದ್ದಾರಿ, ನೆಲಮಂಗಲ-ಹಾಸನ ಹಾಗೂ ಬೆಂಗಳೂರು-ತುಮಕೂರು-ಪುಣೆ ಹೆದ್ದಾರಿಯ ಟೋಲ್ ಪ್ಲಾಜಾಗಳಲ್ಲಿ ಹೊಸ ನಿಯಮದ ಬಗ್ಗೆ ದೊಡ್ಡ ಫಲಕಗಳಲ್ಲಿ ಮಾಹಿತಿ ನೀಡಲಾಗಿದೆ.
ಹೀಗಾಗಿ ವಾಹನ ಸವಾರರು ತಮ್ಮ ಫಾಸ್ಟ್ಟ್ಯಾಗ್ ಸಕ್ರಿಯವಾಗಿದೆಯೇ ಮತ್ತು ಅದರಲ್ಲಿ ಪೂರಕ ಬ್ಯಾಲೆನ್ಸ್ ಇದೆಯೇ ಎಂದು ಖಚಿತಪಡಿಸಿಕೊಂಡು ಹೆದ್ದಾರಿಗಿಳಿಯುವುದು ಉತ್ತಮವಾಗಿದೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…