ದೇಶ- ವಿದೇಶ

ಸಭಾಪತಿ ವಿರುದ್ದ ಅವಿಶ್ವಾಸ ನಿರ್ಣಯ ಜಟಾಪಟಿ: ಡಿ.16ಕ್ಕೆ ಕಲಾಪ ಮುಂದೂಡಿಕೆ

ಹೊಸದಿಲ್ಲಿ: ರಾಜ್ಯಸಭೆ ಸಭಾಪತಿ ಜಗದೀಪ್‌ ಧನಕರ್‌ ಅವರ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ವಾಗ್ವಾದದ ನಂತರ ರಾಜ್ಯಸಭೆ ಕಲಾಪವನ್ನು ಡಿ.16 ಕ್ಕೆ ಮುಂದೂಡಲಾಯಿತು.

ಇಂದು ಸದನದ ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷಗಳು ಸಭಾಪತಿ ಪಕ್ಷಪಾತಿಯ ಗುಣ ಹೊಂದಿದ್ದಾರೆ ಎಂದು ಅವರ ವಿರುದ್ಧ ಮಂಡಿಸಿದ ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆಗೆ ಒತ್ತಾಯಿಸಿದರು. ಅದಕ್ಕೆ ಒಪ್ಪಿಗೆ ನೀಡಲು ನಿರಾಕರಿಸಿದ ಕಾರಣ ಆಡಳಿತ ಪಕ್ಷದ ಸದಸ್ಯರು ಆಕ್ಷೇಪ ಮಾಡಿದರು. ಇದರಿಂದ ಸದನದಲ್ಲಿ ಕೋಲಾಹಲ ಉಂಟಾದ ಕಾರಣ ಕಲಾಪವನ್ನು ಮುಂದೂಡಿದರು.

ಸಭಾಪತಿ ಜಗದೀಪ್‌ ಧನಕರ್‌ ಅವರು ಪಕ್ಷಪಾತಿಯಾಗಿದ್ದಾರೆ. ಸದನದ ಕಲಾಪ ವೇಳೆ ಆಡಳಿತ ಪಕ್ಷದ ಬೆಂಬಲವಾಗಿರುತ್ತಾರೆ. ಆದ ಕಾರಣ ಅವರನ್ನು ಪದಚ್ಯುತಗೊಳಿಸಬೇಕು ಎಂದು ಕಾಂಗ್ರೆಸ್‌ ನೇತೃತ್ವದಲ್ಲಿ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿದ್ದವು.

ಸದನದ ಕಲಾಪದಲ್ಲಿ ಗದ್ದಲದ ನಡುವೆಯೇ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಅವಕಾಶ ನೀಡಿದರು.

ಈ ವೇಳೆ ಮಾತನಾಡಿದ ಮಲ್ಲಕಾರ್ಜುನ ಖರ್ಗೆ, ಸದನದಲ್ಲಿ ಚರ್ಚೆಯ ಸಂದರ್ಭ ಆಡಳಿತ ಪಕ್ಷಕ್ಕೆ ಜಾಸ್ತಿ ಸಮಯ ನೀಡಿ ಪ್ರತಿಪಕ್ಷಗಳನ್ನು ಕಡೆಗಣಿಸುತ್ತಾರೆ. ಆ ಮೂಲಕ ಕಾಂಗ್ರೆಸ್‌ ಹಾಗೂ ಇನ್ನಿತರ ಪಕ್ಷಗಳಿಗೆ ಆಗೌರವ ತೋರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇದಕ್ಕೆ ಜಗದೀಪ್‌ ಧನಕರ್‌ ಪ್ರತಿಕ್ರಿಯಿಸಿ, ಖರ್ಗೆ ಹಾಗೂ ಜೆಪಿ ನಡ್ಡಾ ಅವರನ್ನು ಅಧ್ಯಕ್ಷರ ಚೇಂಬರ್‌ಗೆ ಬಂದು ತಮ್ಮನ್ನು ಭೇಟಿ ಮಾಡಿ ಈ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳಿ ಎಂದು ಹೇಳಿ ಸಭೆಯನ್ನು ಡಿ.16 ಕ್ಕೆ ಮುಂದೂಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

2 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

2 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

2 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

3 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

4 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

4 hours ago