ಹೊಸದಿಲ್ಲಿ: ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್ ಅವರ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ವಾಗ್ವಾದದ ನಂತರ ರಾಜ್ಯಸಭೆ ಕಲಾಪವನ್ನು ಡಿ.16 ಕ್ಕೆ ಮುಂದೂಡಲಾಯಿತು.
ಇಂದು ಸದನದ ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷಗಳು ಸಭಾಪತಿ ಪಕ್ಷಪಾತಿಯ ಗುಣ ಹೊಂದಿದ್ದಾರೆ ಎಂದು ಅವರ ವಿರುದ್ಧ ಮಂಡಿಸಿದ ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆಗೆ ಒತ್ತಾಯಿಸಿದರು. ಅದಕ್ಕೆ ಒಪ್ಪಿಗೆ ನೀಡಲು ನಿರಾಕರಿಸಿದ ಕಾರಣ ಆಡಳಿತ ಪಕ್ಷದ ಸದಸ್ಯರು ಆಕ್ಷೇಪ ಮಾಡಿದರು. ಇದರಿಂದ ಸದನದಲ್ಲಿ ಕೋಲಾಹಲ ಉಂಟಾದ ಕಾರಣ ಕಲಾಪವನ್ನು ಮುಂದೂಡಿದರು.
ಸಭಾಪತಿ ಜಗದೀಪ್ ಧನಕರ್ ಅವರು ಪಕ್ಷಪಾತಿಯಾಗಿದ್ದಾರೆ. ಸದನದ ಕಲಾಪ ವೇಳೆ ಆಡಳಿತ ಪಕ್ಷದ ಬೆಂಬಲವಾಗಿರುತ್ತಾರೆ. ಆದ ಕಾರಣ ಅವರನ್ನು ಪದಚ್ಯುತಗೊಳಿಸಬೇಕು ಎಂದು ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿದ್ದವು.
ಸದನದ ಕಲಾಪದಲ್ಲಿ ಗದ್ದಲದ ನಡುವೆಯೇ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಅವಕಾಶ ನೀಡಿದರು.
ಈ ವೇಳೆ ಮಾತನಾಡಿದ ಮಲ್ಲಕಾರ್ಜುನ ಖರ್ಗೆ, ಸದನದಲ್ಲಿ ಚರ್ಚೆಯ ಸಂದರ್ಭ ಆಡಳಿತ ಪಕ್ಷಕ್ಕೆ ಜಾಸ್ತಿ ಸಮಯ ನೀಡಿ ಪ್ರತಿಪಕ್ಷಗಳನ್ನು ಕಡೆಗಣಿಸುತ್ತಾರೆ. ಆ ಮೂಲಕ ಕಾಂಗ್ರೆಸ್ ಹಾಗೂ ಇನ್ನಿತರ ಪಕ್ಷಗಳಿಗೆ ಆಗೌರವ ತೋರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಇದಕ್ಕೆ ಜಗದೀಪ್ ಧನಕರ್ ಪ್ರತಿಕ್ರಿಯಿಸಿ, ಖರ್ಗೆ ಹಾಗೂ ಜೆಪಿ ನಡ್ಡಾ ಅವರನ್ನು ಅಧ್ಯಕ್ಷರ ಚೇಂಬರ್ಗೆ ಬಂದು ತಮ್ಮನ್ನು ಭೇಟಿ ಮಾಡಿ ಈ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳಿ ಎಂದು ಹೇಳಿ ಸಭೆಯನ್ನು ಡಿ.16 ಕ್ಕೆ ಮುಂದೂಡಿದರು.
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್ಆರ್ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…