ದೇಶ- ವಿದೇಶ

ಸಭಾಪತಿ ವಿರುದ್ದ ಅವಿಶ್ವಾಸ ನಿರ್ಣಯ ಜಟಾಪಟಿ: ಡಿ.16ಕ್ಕೆ ಕಲಾಪ ಮುಂದೂಡಿಕೆ

ಹೊಸದಿಲ್ಲಿ: ರಾಜ್ಯಸಭೆ ಸಭಾಪತಿ ಜಗದೀಪ್‌ ಧನಕರ್‌ ಅವರ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ವಾಗ್ವಾದದ ನಂತರ ರಾಜ್ಯಸಭೆ ಕಲಾಪವನ್ನು ಡಿ.16 ಕ್ಕೆ ಮುಂದೂಡಲಾಯಿತು.

ಇಂದು ಸದನದ ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷಗಳು ಸಭಾಪತಿ ಪಕ್ಷಪಾತಿಯ ಗುಣ ಹೊಂದಿದ್ದಾರೆ ಎಂದು ಅವರ ವಿರುದ್ಧ ಮಂಡಿಸಿದ ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆಗೆ ಒತ್ತಾಯಿಸಿದರು. ಅದಕ್ಕೆ ಒಪ್ಪಿಗೆ ನೀಡಲು ನಿರಾಕರಿಸಿದ ಕಾರಣ ಆಡಳಿತ ಪಕ್ಷದ ಸದಸ್ಯರು ಆಕ್ಷೇಪ ಮಾಡಿದರು. ಇದರಿಂದ ಸದನದಲ್ಲಿ ಕೋಲಾಹಲ ಉಂಟಾದ ಕಾರಣ ಕಲಾಪವನ್ನು ಮುಂದೂಡಿದರು.

ಸಭಾಪತಿ ಜಗದೀಪ್‌ ಧನಕರ್‌ ಅವರು ಪಕ್ಷಪಾತಿಯಾಗಿದ್ದಾರೆ. ಸದನದ ಕಲಾಪ ವೇಳೆ ಆಡಳಿತ ಪಕ್ಷದ ಬೆಂಬಲವಾಗಿರುತ್ತಾರೆ. ಆದ ಕಾರಣ ಅವರನ್ನು ಪದಚ್ಯುತಗೊಳಿಸಬೇಕು ಎಂದು ಕಾಂಗ್ರೆಸ್‌ ನೇತೃತ್ವದಲ್ಲಿ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿದ್ದವು.

ಸದನದ ಕಲಾಪದಲ್ಲಿ ಗದ್ದಲದ ನಡುವೆಯೇ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಅವಕಾಶ ನೀಡಿದರು.

ಈ ವೇಳೆ ಮಾತನಾಡಿದ ಮಲ್ಲಕಾರ್ಜುನ ಖರ್ಗೆ, ಸದನದಲ್ಲಿ ಚರ್ಚೆಯ ಸಂದರ್ಭ ಆಡಳಿತ ಪಕ್ಷಕ್ಕೆ ಜಾಸ್ತಿ ಸಮಯ ನೀಡಿ ಪ್ರತಿಪಕ್ಷಗಳನ್ನು ಕಡೆಗಣಿಸುತ್ತಾರೆ. ಆ ಮೂಲಕ ಕಾಂಗ್ರೆಸ್‌ ಹಾಗೂ ಇನ್ನಿತರ ಪಕ್ಷಗಳಿಗೆ ಆಗೌರವ ತೋರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇದಕ್ಕೆ ಜಗದೀಪ್‌ ಧನಕರ್‌ ಪ್ರತಿಕ್ರಿಯಿಸಿ, ಖರ್ಗೆ ಹಾಗೂ ಜೆಪಿ ನಡ್ಡಾ ಅವರನ್ನು ಅಧ್ಯಕ್ಷರ ಚೇಂಬರ್‌ಗೆ ಬಂದು ತಮ್ಮನ್ನು ಭೇಟಿ ಮಾಡಿ ಈ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳಿ ಎಂದು ಹೇಳಿ ಸಭೆಯನ್ನು ಡಿ.16 ಕ್ಕೆ ಮುಂದೂಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

27 mins ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

5 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

5 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

5 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

10 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

10 hours ago