ಹೊಸದಿಲ್ಲಿ: ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್ ಅವರ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ವಾಗ್ವಾದದ ನಂತರ ರಾಜ್ಯಸಭೆ ಕಲಾಪವನ್ನು ಡಿ.16 ಕ್ಕೆ ಮುಂದೂಡಲಾಯಿತು.
ಇಂದು ಸದನದ ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷಗಳು ಸಭಾಪತಿ ಪಕ್ಷಪಾತಿಯ ಗುಣ ಹೊಂದಿದ್ದಾರೆ ಎಂದು ಅವರ ವಿರುದ್ಧ ಮಂಡಿಸಿದ ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆಗೆ ಒತ್ತಾಯಿಸಿದರು. ಅದಕ್ಕೆ ಒಪ್ಪಿಗೆ ನೀಡಲು ನಿರಾಕರಿಸಿದ ಕಾರಣ ಆಡಳಿತ ಪಕ್ಷದ ಸದಸ್ಯರು ಆಕ್ಷೇಪ ಮಾಡಿದರು. ಇದರಿಂದ ಸದನದಲ್ಲಿ ಕೋಲಾಹಲ ಉಂಟಾದ ಕಾರಣ ಕಲಾಪವನ್ನು ಮುಂದೂಡಿದರು.
ಸಭಾಪತಿ ಜಗದೀಪ್ ಧನಕರ್ ಅವರು ಪಕ್ಷಪಾತಿಯಾಗಿದ್ದಾರೆ. ಸದನದ ಕಲಾಪ ವೇಳೆ ಆಡಳಿತ ಪಕ್ಷದ ಬೆಂಬಲವಾಗಿರುತ್ತಾರೆ. ಆದ ಕಾರಣ ಅವರನ್ನು ಪದಚ್ಯುತಗೊಳಿಸಬೇಕು ಎಂದು ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿದ್ದವು.
ಸದನದ ಕಲಾಪದಲ್ಲಿ ಗದ್ದಲದ ನಡುವೆಯೇ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಅವಕಾಶ ನೀಡಿದರು.
ಈ ವೇಳೆ ಮಾತನಾಡಿದ ಮಲ್ಲಕಾರ್ಜುನ ಖರ್ಗೆ, ಸದನದಲ್ಲಿ ಚರ್ಚೆಯ ಸಂದರ್ಭ ಆಡಳಿತ ಪಕ್ಷಕ್ಕೆ ಜಾಸ್ತಿ ಸಮಯ ನೀಡಿ ಪ್ರತಿಪಕ್ಷಗಳನ್ನು ಕಡೆಗಣಿಸುತ್ತಾರೆ. ಆ ಮೂಲಕ ಕಾಂಗ್ರೆಸ್ ಹಾಗೂ ಇನ್ನಿತರ ಪಕ್ಷಗಳಿಗೆ ಆಗೌರವ ತೋರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಇದಕ್ಕೆ ಜಗದೀಪ್ ಧನಕರ್ ಪ್ರತಿಕ್ರಿಯಿಸಿ, ಖರ್ಗೆ ಹಾಗೂ ಜೆಪಿ ನಡ್ಡಾ ಅವರನ್ನು ಅಧ್ಯಕ್ಷರ ಚೇಂಬರ್ಗೆ ಬಂದು ತಮ್ಮನ್ನು ಭೇಟಿ ಮಾಡಿ ಈ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳಿ ಎಂದು ಹೇಳಿ ಸಭೆಯನ್ನು ಡಿ.16 ಕ್ಕೆ ಮುಂದೂಡಿದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…