ದೇಶ- ವಿದೇಶ

ಮೂಡದ ಒಮ್ಮತ : ಅಮೆರಿಕ-ಇರಾನ್ 21 ಗಂಟೆಗಳ ಮಾತುಕತೆ ವಿಫಲ

ಇಸ್ಲಾಮಾಬಾದ್ : ಪಶ್ಚಿಮ ಏಷ್ಯಾ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ 21 ಗಂಟೆಗಳ ಸುದೀರ್ಘ ಮಾತುಕತೆ ಯಾವುದೇ ಒಪ್ಪಂದವಿಲ್ಲದೆ ವಿಫಲವಾಗಿದೆ.

ಅಮೆರಿಕದ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ ನೇತೃತ್ವದ ನಿಯೋಗವು ಶನಿವಾರದಿಂದ ಭಾನುವಾರ ಬೆಳಗ್ಗೆವರೆಗೆ ನಡೆದ ಈ ಚರ್ಚೆಯಲ್ಲಿ ಭಾಗವಹಿಸಿತ್ತು. ಮಾತುಕತೆ ಮುಗಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವ್ಯಾನ್ಸ್, “21 ಗಂಟೆಗಳ ಕಾಲ ನಾವು ಗಂಭೀರ ವಿಷಯಗಳ ಬಗ್ಗೆ ಚರ್ಚಿಸಿದ್ದೇವೆ. ಇದು ಒಳ್ಳೆಯ ವಿಷಯ. ಆದರೆ ನಾವು ಯಾವುದೇ ಒಪ್ಪಂದಕ್ಕೆ ಬರಲು ಸಾಧ್ಯವಾಗಲಿಲ್ಲ” ಎಂದು ಹೇಳಿದರು.

ಇರಾನ್ ನಮ್ಮ ಷರತ್ತುಗಳನ್ನು ಒಪ್ಪಿಕೊಳ್ಳಲಿಲ್ಲ. ಪರಮಾಣು ಶಸ್ತ್ರಾಸ್ತ್ರಗಳ ನಿಯಂತ್ರಣ ಮತ್ತು ಇರಾನ್ ಪರಮಾಣು ಕಾರ್ಯಕ್ರಮವೇ ಈ ಮಾತುಕತೆಯಲ್ಲಿ ಪ್ರಮುಖ ಅಡಚಣೆಯಾಗಿತ್ತು ಎಂದು ತಿಳಿದುಬಂದಿದೆ. “ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ತಯಾರಿಸುವುದಿಲ್ಲ ಎಂಬ ದೃಢ ನಿಲುವನ್ನು ತೋರಿಸಬೇಕು. ಇದು ನಮ್ಮ ರೆಡ್ ಲೈನ್ ಎಂದು ವ್ಯಾನ್ಸ್ ಒತ್ತಿ ಹೇಳಿದರು.

ಇನ್ನೂ “ಅಮೆರಿಕದ ಅತಿಯಾದ ಮತ್ತು ಕಾನೂನುಬಾಹಿರ ಬೇಡಿಕೆಗಳೇ ಮಾತುಕತೆ ವಿಫಲಗೊಳಿಸಿವೆ” ಎಂದು ಇರಾನ್‌ ಆರೋಪಿಸಿದೆ. ಇರಾನ್ ನಿಯೋಗವು ರಾಷ್ಟ್ರೀಯ ಹಿತಗಳನ್ನು ರಕ್ಷಿಸಲು ಪ್ರಯತ್ನಿಸಿದ್ದರೂ ಅಮೆರಿಕದ ಅಸಮಂಜಸ ಬೇಡಿಕೆಗಳಿಂದ ಚರ್ಚೆ ಮುಂದುವರಿಯಲಿಲ್ಲ ಎಂದು ಇರಾನ್‌ನ ಅಧಿಕೃತ ಮೂಲಗಳು ತಿಳಿಸಿವೆ.

ಐತಿಹಾಸಿಕ ಸಂಭಾಷಣೆ
1979ರ ಇಸ್ಲಾಮಿಕ್ ಕ್ರಾಂತಿಯ ನಂತರ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮೊದಲ ನೇರ ಉನ್ನತ ಮಟ್ಟದ ಮಾತುಕತೆ ಇದಾಗಿತ್ತು. ಪಾಕಿಸ್ತಾನ ಈ ಸಂಭಾಷಣೆಗೆ ವೇದಿಕೆಯನ್ನು ಒದಗಿಸಿತ್ತು. ಆರ್ಥಿಕ, ಸೈನಿಕ, ಕಾನೂನು ಮತ್ತು ಪರಮಾಣು ವಿಷಯಗಳು ಚರ್ಚೆಯಲ್ಲಿದ್ದವು.

ಮಾತುಕತೆ ವಿಫಲವಾದ ಬಳಿಕ ವ್ಯಾನ್ಸ್ ಪಾಕಿಸ್ತಾನದಿಂದ ನಿರ್ಗಮಿಸಿದ್ದಾರೆ. ಅಮೆರಿಕವು “ಇದು ನಮ್ಮ ಅಂತಿಮ ಮತ್ತು ಉತ್ತಮ ಪ್ರಸ್ತಾಪ” ಎಂದು ಇರಾನ್‌ಗೆ ಹೇಳಿದೆ. ಇರಾನ್ ಇದನ್ನು ಸ್ವೀಕರಿಸುತ್ತದೆಯೇ ಎಂಬುದು ಈಗ ಪ್ರಶ್ನೆಯಾಗಿದೆ. ಮುಂದಿನ ದಿನಗಳಲ್ಲಿ ಮತ್ತೆ ಮಾತುಕತೆ ನಡೆಯುವ ಸಾಧ್ಯತೆ ಬಗ್ಗೆ ಯಾವುದೇ ಸುಳಿವು ಲಭ್ಯವಿಲ್ಲ.

ಈ ಮಾತುಕತೆ ವಿಫಲತೆಯಿಂದ ಪಶ್ಚಿಮ ಏಷ್ಯಾದ ಉದ್ವಿಗ್ನತೆ ಮುಂದುವರಿಯುವ ಸಾಧ್ಯತೆ ಇದೆ ಎಂದು ವರದಿಗಳು ಹೇಳುತ್ತಿವೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

6 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

7 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

7 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

8 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

12 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

15 hours ago