ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ.
ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಅವರು ರಾಜ್ಯಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿ, ಅಮೆರಿಕದೊಂದಿಗೆ ಯಾವುದೇ ಮಾತುಕತೆ ನಡೆಯುತ್ತಿಲ್ಲ ಮತ್ತು ಮಾತುಕತೆ ನಡೆಸುವ ಯೋಜನೆಯೂ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಜೊತೆ ಮಾತುಕತೆ ನಡೆಯುತ್ತಿದೆ ಎಂದು ಹೇಳಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ಅಮೆರಿಕ ನೀಡಿದ 15 ಅಂಶಗಳ ಕದನ ವಿರಾಮ ಪ್ರಸ್ತಾಪವನ್ನು ತಿರಸ್ಕರಿಸಿದೆ. ಇರಾನ್ ತನ್ನದೇ ಆದ ಷರತ್ತುಗಳೊಂದಿಗೆ ಪ್ರತಿಪ್ರಸ್ತಾಪ ಸಲ್ಲಿಸಿದೆ ಎಂದು ಹೇಳಿದೆ.
ಅಮೆರಿಕದ ಪ್ರಸ್ತಾಪವನ್ನು ʼಒತ್ತಾಯʼ ಎಂದು ವರ್ಣಿಸಿರುವ ಇರಾನ್ ತನ್ನ ಅಧಿಕಾರಿಗಳ ಹತ್ಯೆ ನಿಲ್ಲಿಸುವುದು, ಯುದ್ಧದ ನಷ್ಟಪರಿಹಾರ, ಹಾರ್ಮುಜ್ ಕಾಲುವೆಯ ಮೇಲಿನ ತನ್ನ ಸಾರ್ವಭೌಮತ್ವ ಮತ್ತು ಭವಿಷ್ಯದಲ್ಲಿ ಯಾವುದೇ ದಾಳಿ ನಡೆಯದಂತೆ ಖಾತರಿ ಒದಗಿಸುವುದು ಸೇರಿದಂತೆ ತನ್ನ ಷರತ್ತುಗಳನ್ನು ಅಮೆರಿಕ ಮುಂದಿಟ್ಟಿದೆ ಎಂದು ತಿಳಿದುಬಂದಿದೆ.
ಅಮೆರಿಕ ಈಗಾಗಲೇ ಪಾಕಿಸ್ತಾನ ಮೂಲಕ ಮಧ್ಯಸ್ಥಿಕೆಯ ಪ್ರಯತ್ನ ಮಾಡುತ್ತಿದ್ದರೂ, ಇರಾನ್ ಅದನ್ನು “ಮಾತುಕತೆ” ಎಂದು ಒಪ್ಪಿಕೊಳ್ಳುತ್ತಿಲ್ಲ. ಮಧ್ಯಸ್ಥಿಕೆಯ ಮೂಲಕ ಬಂದ ಸಂದೇಶಗಳು ಮಾತುಕತೆ ಎಂದು ಅರ್ಥವಲ್ಲ ಎಂದು ವಿದೇಶಾಂಗ ಸಚಿವ ಅರಾಗ್ಚಿ ಸ್ಪಷ್ಟಪಡಿಸಿದ್ದಾರೆ.
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…