ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಬಗ್ಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನಿರಾಸೆ ವ್ಯಕ್ತಪಡಿಸಿದ್ದಾರೆ.
ಸಮಾಜದ ದುರ್ಬಲ ವರ್ಗದವರಿಗೆ ಸೌಲಭ್ಯಗಳ ಕೊರತೆಯಂತಹ ಮೂಲಭೂತ ಸಮಸ್ಯೆಗಳನ್ನು ನಿರ್ಲಕ್ಷಿಸಿ ಬರೀ ಸರ್ಕಾರ ಹೊಗಳುವುದರಲ್ಲಿಯೇ ತುಂಬಿವೆ ಎಂದಿದ್ದಾರೆ.
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದ ಖರ್ಗೆ ಅವರು, ರಾಷ್ಟ್ರಪತಿ ಭಾಷಣವನ್ನು ಸರ್ಕಾರ ರಚಿಸಿದೆ. ಸದನದಲ್ಲಿ ಜೈ ಸಂವಿಧಾನ ಘೋಷಣೆಯೊಂದಿಗೆ ಸಮಸ್ಯೆಗಳನ್ನು ಎದುರಿಸುತ್ತಿರುವ ಸಂಸದರು ಮತ್ತು ಪಕ್ಷಗಳಿವೆ.
ರಾಷ್ಟ್ರಪತಿಗಳ ಜಂಟಿ ಭಾಷಣದಲ್ಲಿ ಯಾವುದೇ ದೂರದೃಷ್ಟಿ ಮತ್ತು ನಿರ್ದೇಶನ ಇಲ್ಲ. ಬಡವರು, ದಲಿತರು ಮತ್ತು ಅಲ್ಪಸಂಖ್ಯಾತರ ಪ್ರಸ್ತಾಪವಿಲ್ಲ ಎಂದು ಕಿಡಿಕಾರಿದರು.
ಪ್ರಧಾನಿ ನರೇಂದ್ರ ಮೋದಿಯನ್ನು ಗುರಿಯಾಗಿಸಿ ಟೀಕಾ ಪ್ರಹಾರ ನಡೆಸಿದ ಖರ್ಗೆ ಅವರು, ವಿಪಕ್ಷಗಳು ಸಾಮಾನ್ಯ ಜನರ ಸಂಕಷ್ಟದ ಬಗ್ಗೆ ಮಾತನಾಡುತ್ತವೆ. ಆದರೆ ಮೋದಿ ಅವರು ಕೇವಲ ಮನ್ ಕಿ ಬಾತ್ ಮಾಡುತ್ತಾರೆ. ಕಳೆದ ಒಂದು ವರ್ಷದಿಂದ ಹೊತ್ತಿ ಉರಿಯುತ್ತಿರುವ ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿಲ್ಲ. ಅವರು ಕೇವಲ ಘೋಷಣೆಗಳನ್ನು ನೀಡುವುದರಲ್ಲಿ ನಿಪುಣರು ಎಂದು ವಾಗ್ದಾಳಿ ನಡೆಸಿದರು.
ಪ್ರಧಾನಿ ಮೋದಿಯ ಚುನಾವಣಾ ಸಮಯದಲ್ಲಿ ತಮ್ಮ ಭಾಷಣಗಳ ಮೂಲಕ ಸಮಾಜ ಒಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ ಖರ್ಗೆ, ಈ ಹಿಂದೆ ಯಾವ ಪ್ರಧಾನಿಯೂ ಈ ರೀತಿ ಮಾಡಿಲ್ಲ. ಇದಲ್ಲದೇ ಸಂಸತ್ತಿನ ಸಂಕೀರ್ಣದಲ್ಲಿರುವ ಮಹಾತ್ಮಗಾಂಧಿ ಮತ್ತು ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗಳನ್ನು ಅವುಗಳ ಮೂಲ ಸ್ಥಳಗಳಿಗೆ ಮರುಸ್ಥಾಪಿಸಬೇಕು ಎಂದು ರಾಜ್ಯಸಭಾ ಅಧ್ಯಕ್ಷರನ್ನು ಒತ್ತಾಯಿಸಿದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…