ದೇಶ- ವಿದೇಶ

ಈಗಿನ ಜನಸಂಖ್ಯೆ ಆಧಾರದ ಕ್ಷೇತ್ರ ಮರುವಿಂಗಡನೆ ಬೇಡ: ಎಂಕೆ ಸ್ಟಾಲಿನ್‌

ಚೆನ್ನೈ: ದೇಶದ ಈಗಿನ ಜನಸಂಖ್ಯೆ ಆಧರಿಸಿ ಲೋಕಸಭೆ ಕ್ಷೇತ್ರಗಳ ಮರುವಿಂಗಡನೆ ಸಂಸತ್‌ನಲ್ಲಿ ದಕ್ಷಿಣ ರಾಜ್ಯಗಳ ಪ್ರಾತಿನಿಧ್ಯವನ್ನು ಕಡಿಮೆ ಮಾಡುತ್ತದೆ. ನಾವು ಒಟ್ಟಾಗಿ ಇದನ್ನು ವಿರೋಧಿಸಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಹೇಳಿದ್ದಾರೆ.

ಚೆನ್ನೈನಲ್ಲಿ ನಡೆದ ಮರುವಿಂಗಡನೆ ಸಂಬಂಧ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಈಗಿನ ಜನಸಂಖ್ಯಾ ಆಧಾರದ ಮೇಲೆ ಕ್ಷೇತ್ರ ಮರುವಿಂಗಡನೆಯಿಂದ ನಮ್ಮ ಪ್ರಾತಿನಿಧ್ಯ ಕಡಿಮೆಯಾಗುತ್ತದೆ. ಇದರಿಂದ ರಾಜ್ಯಗಳ ಅನುದಾನ ಪಡೆಯಲು ಹೋರಾಟ ಮಾಡಬೇಕು. ನಮ್ಮ ಅಭಿಪ್ರಾಯ ಪಡೆಯದೆ ಕಾನೂನುಗಳನ್ನು ರೂಪಿಸಲಾಗುತ್ತದೆ. ಸಾಮಾಜಿಕ ನ್ಯಾಯದ ಮೇಲೆ ಪರಿಣಾಮ ಬೀರಲಿದೆ. ನಾಗರೀಕರು ತಮ್ಮ ದೇಶದಲ್ಲೇ ರಾಜಕೀಯ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಹೇಳಿದರು.

ಪ್ರಜಸತ್ತಾತ್ಮಕ ಪ್ರಾತಿನಿಧ್ಯವನ್ನು ಬಲಪಡಿಸುವ ಯಾವುದನ್ನೂ ನಾವು ವಿರೋಧಿಸುವುದಿಲ್ಲ. ಆ ಪ್ರಕ್ರಿಯೆ ಮುಕ್ತವಾಗಿರಬೇಕು. ಇದು ಮರುವಿಂಗಡನೆಯ ವಿರುದ್ಧದ ಹೋರಾಟವಲ್ಲ. ನ್ಯಾಯಯುತ ಮರುವಿಂಗಡಣೆಗೆ ನಮ್ಮ ಆಗ್ರಹ ಎಂದರು.

ಈ ಸಭೆಗೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ, ಪಂಜಾಬ್‌ ಮುಖ್ಯಮಂತ್ರಿ ಭಗವಂತ ಮಾನ್‌, ಬಿ.ಆರ್‌.ಎಸ್‌ ಪಕ್ಷದ ನಾಯಕ ಕೆ.ಟಿ ರಾಮರಾವ್‌ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

30 mins ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

2 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

3 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

3 hours ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

3 hours ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

3 hours ago