ಚೆನ್ನೈ: ದೇಶದ ಈಗಿನ ಜನಸಂಖ್ಯೆ ಆಧರಿಸಿ ಲೋಕಸಭೆ ಕ್ಷೇತ್ರಗಳ ಮರುವಿಂಗಡನೆ ಸಂಸತ್ನಲ್ಲಿ ದಕ್ಷಿಣ ರಾಜ್ಯಗಳ ಪ್ರಾತಿನಿಧ್ಯವನ್ನು ಕಡಿಮೆ ಮಾಡುತ್ತದೆ. ನಾವು ಒಟ್ಟಾಗಿ ಇದನ್ನು ವಿರೋಧಿಸಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ.
ಚೆನ್ನೈನಲ್ಲಿ ನಡೆದ ಮರುವಿಂಗಡನೆ ಸಂಬಂಧ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಈಗಿನ ಜನಸಂಖ್ಯಾ ಆಧಾರದ ಮೇಲೆ ಕ್ಷೇತ್ರ ಮರುವಿಂಗಡನೆಯಿಂದ ನಮ್ಮ ಪ್ರಾತಿನಿಧ್ಯ ಕಡಿಮೆಯಾಗುತ್ತದೆ. ಇದರಿಂದ ರಾಜ್ಯಗಳ ಅನುದಾನ ಪಡೆಯಲು ಹೋರಾಟ ಮಾಡಬೇಕು. ನಮ್ಮ ಅಭಿಪ್ರಾಯ ಪಡೆಯದೆ ಕಾನೂನುಗಳನ್ನು ರೂಪಿಸಲಾಗುತ್ತದೆ. ಸಾಮಾಜಿಕ ನ್ಯಾಯದ ಮೇಲೆ ಪರಿಣಾಮ ಬೀರಲಿದೆ. ನಾಗರೀಕರು ತಮ್ಮ ದೇಶದಲ್ಲೇ ರಾಜಕೀಯ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಹೇಳಿದರು.
ಪ್ರಜಸತ್ತಾತ್ಮಕ ಪ್ರಾತಿನಿಧ್ಯವನ್ನು ಬಲಪಡಿಸುವ ಯಾವುದನ್ನೂ ನಾವು ವಿರೋಧಿಸುವುದಿಲ್ಲ. ಆ ಪ್ರಕ್ರಿಯೆ ಮುಕ್ತವಾಗಿರಬೇಕು. ಇದು ಮರುವಿಂಗಡನೆಯ ವಿರುದ್ಧದ ಹೋರಾಟವಲ್ಲ. ನ್ಯಾಯಯುತ ಮರುವಿಂಗಡಣೆಗೆ ನಮ್ಮ ಆಗ್ರಹ ಎಂದರು.
ಈ ಸಭೆಗೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ, ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್, ಬಿ.ಆರ್.ಎಸ್ ಪಕ್ಷದ ನಾಯಕ ಕೆ.ಟಿ ರಾಮರಾವ್ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದಾರೆ.
ಟೆಹರಾನ್: ಕುವೈತ್ ವಿದ್ಯುತ್ ಸ್ಥಾವರದ ಮೇಲೆ ಇರಾನ್ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಇದು ದೇಶದ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…
ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ…
ಜಾತಿ ಆಧಾರಿತ ಅಪರಾಧಕ್ಕೆ ತಡೆ, ಅಂತರ್ಜಾತಿ ವಿವಾಹಿತರಿಗೆ ರಕ್ಷಣೆ ಒದಗಿಸುವ ಮಹತ್ವಪೂರ್ಣವಾದ ‘ಇವ ನಮ್ಮವ ಇವ ನಮ್ಮವ’ ಮಸೂದೆಯನ್ನು ರಾಜ್ಯ…
ನಾಳೆ ಸೇವೆಯಿಂದ ನಿವೃತ್ತಿ ಹೊಂದಲಿರುವ ಮೇಷ್ಟ್ರು ಸಿ.ಹರಕುಮಾರ್, ಬರಹಗಾರ ಮೂರ್ನಾಲ್ಕು ದಶಕಗಳ ಹಿಂದೆ ಮ್ಯಾನೇಜ್ಮೆಂಟ್ ಕೋರ್ಸ್ ಅಥವಾ ಎಂಬಿಎ ಪದವಿ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ದಾವಣಗೆರೆ ಉಪ ಚುನಾವಣೆ ಬಂಡಾಯ ಶಮನಗೊಳಿಸಿದ ಮುಖ್ಯಮಂತ್ರಿ ದಿಲ್ಲಿಯ ಕಾಂಗ್ರೆಸ್ ವರಿಷ್ಠರಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ…