ದೇಶ- ವಿದೇಶ

ಈಗಿನ ಜನಸಂಖ್ಯೆ ಆಧಾರದ ಕ್ಷೇತ್ರ ಮರುವಿಂಗಡನೆ ಬೇಡ: ಎಂಕೆ ಸ್ಟಾಲಿನ್‌

ಚೆನ್ನೈ: ದೇಶದ ಈಗಿನ ಜನಸಂಖ್ಯೆ ಆಧರಿಸಿ ಲೋಕಸಭೆ ಕ್ಷೇತ್ರಗಳ ಮರುವಿಂಗಡನೆ ಸಂಸತ್‌ನಲ್ಲಿ ದಕ್ಷಿಣ ರಾಜ್ಯಗಳ ಪ್ರಾತಿನಿಧ್ಯವನ್ನು ಕಡಿಮೆ ಮಾಡುತ್ತದೆ. ನಾವು ಒಟ್ಟಾಗಿ ಇದನ್ನು ವಿರೋಧಿಸಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಹೇಳಿದ್ದಾರೆ.

ಚೆನ್ನೈನಲ್ಲಿ ನಡೆದ ಮರುವಿಂಗಡನೆ ಸಂಬಂಧ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಈಗಿನ ಜನಸಂಖ್ಯಾ ಆಧಾರದ ಮೇಲೆ ಕ್ಷೇತ್ರ ಮರುವಿಂಗಡನೆಯಿಂದ ನಮ್ಮ ಪ್ರಾತಿನಿಧ್ಯ ಕಡಿಮೆಯಾಗುತ್ತದೆ. ಇದರಿಂದ ರಾಜ್ಯಗಳ ಅನುದಾನ ಪಡೆಯಲು ಹೋರಾಟ ಮಾಡಬೇಕು. ನಮ್ಮ ಅಭಿಪ್ರಾಯ ಪಡೆಯದೆ ಕಾನೂನುಗಳನ್ನು ರೂಪಿಸಲಾಗುತ್ತದೆ. ಸಾಮಾಜಿಕ ನ್ಯಾಯದ ಮೇಲೆ ಪರಿಣಾಮ ಬೀರಲಿದೆ. ನಾಗರೀಕರು ತಮ್ಮ ದೇಶದಲ್ಲೇ ರಾಜಕೀಯ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಹೇಳಿದರು.

ಪ್ರಜಸತ್ತಾತ್ಮಕ ಪ್ರಾತಿನಿಧ್ಯವನ್ನು ಬಲಪಡಿಸುವ ಯಾವುದನ್ನೂ ನಾವು ವಿರೋಧಿಸುವುದಿಲ್ಲ. ಆ ಪ್ರಕ್ರಿಯೆ ಮುಕ್ತವಾಗಿರಬೇಕು. ಇದು ಮರುವಿಂಗಡನೆಯ ವಿರುದ್ಧದ ಹೋರಾಟವಲ್ಲ. ನ್ಯಾಯಯುತ ಮರುವಿಂಗಡಣೆಗೆ ನಮ್ಮ ಆಗ್ರಹ ಎಂದರು.

ಈ ಸಭೆಗೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ, ಪಂಜಾಬ್‌ ಮುಖ್ಯಮಂತ್ರಿ ಭಗವಂತ ಮಾನ್‌, ಬಿ.ಆರ್‌.ಎಸ್‌ ಪಕ್ಷದ ನಾಯಕ ಕೆ.ಟಿ ರಾಮರಾವ್‌ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

24 mins ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

57 mins ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

2 hours ago

​ಮೈಸೂರು ವಿ.ವಿ | ಸಂಶೋಧಕರ ಶಿಷ್ಯವೇತನ ಬಿಕ್ಕಟ್ಟು ಬಗೆಹರಿಸಿದ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST)…

2 hours ago

ಮೈಸೂರು | ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ ; ಫುಟ್‌ಪಾತ್ ಆಕ್ರಮಿಸಿದ್ದ 30 ಅಂಗಡಿಗಳಿಗೆ ಶಾಕ್‌

ಮೈಸೂರು : ಫುಟ್‌ಪಾತ್‌ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5…

5 hours ago

ರಸ್ತೆ ವೈಟ್‌ ಟಾಪಿಂಗ್‌ ; ಟೆಂಡರ್‌ ಶುವರ್‌ ಮಾದರಿ ಕಡ್ಡಾಯ

ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್‌ ಜೋನ್‌ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್‌ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…

7 hours ago