ದೇಶ- ವಿದೇಶ

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ ಶಕ್ತಿಯುತ ಪಾತ್ರದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ʻಆಪ್ ಕಿ ಅದಾಲತ್’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯಶ್, ತಾವು ಶ್ರೀರಾಮನ ಪಾತ್ರದ ಬದಲಿಗೆ ರಾವಣನ ಪಾತ್ರವನ್ನೇ ಏಕೆ ಆಯ್ಕೆ ಮಾಡಿಕೊಂಡ್ರು ಎಂಬುದರ ಕುರಿತು ಮುಕ್ತವಾಗಿ ಮಾತನಾಡಿ ತಮ್ಮ ಖಡಕ್ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಕಾರ್ಯಕ್ರಮದಲ್ಲಿ ರಜತ್ ಶರ್ಮಾ ಅವರು, ʻನೀವು ಈ ಚಿತ್ರಕ್ಕೆ ಕೇವಲ ನಟರಷ್ಟೇ ಅಲ್ಲ, ಸಹ-ನಿರ್ಮಾಪಕರೂ ಹೌದು. ಸಿನಿಮಾದ ಮೇಲೆ ನಿಮಗೆ ಸಂಪೂರ್ಣ ಹಿಡಿತವಿರುವಾಗ, ಶ್ರೀರಾಮನ ಪಾತ್ರವನ್ನ ಬಿಟ್ಟು ರಾವಣನ ನೆಗೆಟಿವ್ ಪಾತ್ರವನ್ನೇ ಏಕೆ ಆರಿಸಿಕೊಂಡಿರಿ?ʼ ಎಂದು ಯಶ್ ಅವರನ್ನ ಪ್ರಶ್ನಿಸಿದರು. ಇದಕ್ಕೆ ತಮ್ಮದೇ ಖಡಕ್ ಶೈಲಿಯಲ್ಲಿ ಉತ್ತರಿಸಿದ ಯಶ್, “ಬೆಳ್ಳಿಪರದೆಯ ಮೇಲೆ ಪ್ರಭು ಶ್ರೀರಾಮನ ದೈವಿಕತೆ, ಒಳ್ಳೆಯತನ ಮತ್ತು ಮಹತ್ವವನ್ನ ಪರಿಣಾಮಕಾರಿಯಾಗಿ ಹಾಗೂ ಶಕ್ತಿಯುತವಾಗಿ ತೋರಿಸಬೇಕೆಂದರೆ, ಆತನಿಗೆ ಎದುರಾಗಿ ನಿಲ್ಲುವ ನೆಗೆಟಿವ್ ಪಾತ್ರ ರಾವಣನ ಕೆಟ್ಟತನ ಮತ್ತು ಶಕ್ತಿಯೂ ಅಷ್ಟೇ ಪ್ರಬಲವಾಗಿ ಕಾಣಿಸಿಕೊಳ್ಳಬೇಕಾಗುತ್ತದೆ” ಎಂದು ವಿವರಿಸಿದರು.

ರಜತ್ ಶರ್ಮಾ ಅವರು ನಗುತ್ತಲೇ, ʻಹಾಗಾದರೆ ಕೆಟ್ಟತನವನ್ನ ತೋರಿಸುವ ಗುತ್ತಿಗೆಯನ್ನ ನೀವೇ ತೆಗೆದುಕೊಂಡಿದ್ದೀರಾ?” ಎಂದು ಮರುಪ್ರಶ್ನಿಸಿದಾಗ, ಯಶ್, “ಹೌದು.. ಆ ರಾವಣನ ಆಳ ಮತ್ತು ಪ್ರಭಾವವನ್ನ ನನಗಿಂತ ಉತ್ತಮವಾಗಿ ತೆರೆಯ ಮೇಲೆ ತರಲು ಯಾರಿಂದಲೂ ಸಾಧ್ಯವಿಲ್ಲ. ಕೇವಲ ನೆಗೆಟಿವ್ ಪಾತ್ರಗಳಲ್ಲಷ್ಟೇ ಅಲ್ಲ, ಪಾಸಿಟಿವ್ ಪಾತ್ರಗಳನ್ನ ಮಾಡಿದಾಗಲೂ ನನಗೆ ಅಷ್ಟೇ ಆತ್ಮವಿಶ್ವಾಸವಿರುತ್ತದೆ. ನನಗಿಂತ ಉತ್ತಮವಾಗಿ ಯಾರೂ ಕಾಣಿಸಲು ಸಾಧ್ಯವಿಲ್ಲ ಎಂಬ ನಂಬಿಕೆ ನನಗಿದೆ” ಎಂದರು.

ಆಂದೋಲನ ಡೆಸ್ಕ್

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

11 mins ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

1 hour ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

4 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

5 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

5 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

6 hours ago