ದೇಶ- ವಿದೇಶ

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.

ಐಎಎಸ್, ಐಪಿಎಸ್, ಐಎಫ್‌ಎಸ್‌ನಂತಹ ದೇಶದ ಅತ್ಯುನ್ನತ ಶ್ರೇಣಿಯ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಸಾಲಿನ ಅಂದರೆ 2026ನೇ ಸಾಲಿನ ಗ್ರೂಪ್ ಎ ಮತ್ತು ಬಿ ಯ ನಾಗರಿಕ ಸೇವಾ ಪರೀಕ್ಷೆ ಮತ್ತು ಭಾರತೀಯ ಅರಣ್ಯ ಸೇವಾ ಪರೀಕ್ಷೆ(ಐಎಫ್‌ಎಸ್) ಹುದ್ದೆಗಳಿಗೆ ಅಧಿಸೂಚನೆ ಇದಾಗಿದ್ದು, ಈ ಕುರಿತ ಮಾಹಿತಿ ಇಲ್ಲಿದೆ.

ನಾಗರಿಕ ಸೇವಾ ಪರೀಕ್ಷೆಯಲ್ಲಿ ಕೆಲವೊಂದು ಪ್ರಮುಖ ಬದಲಾವಣೆ ಮಾಡಲಾಗಿದೆ. ಕೇಂದ್ರ ನಾಗರಿಕ ಸೇವಾ ಆಯೋಗ-ಯುಪಿಎಸ್‌ಸಿ, ಹೊಸ ನಿಯಮಗಳನ್ನು ಪರಿಚಯಿಸಿದೆ. ಈಗಾಗಲೇ ಐಎಎಸ್ ಮತ್ತು ಐಎಫ್‌ಎಸ್‌ನಂತಹ ಉನ್ನತ ನಾಗರಿಕ ಸೇವೆಗಳಿಗೆ ನೇಮಕಗೊಂಡ ಅಭ್ಯರ್ಥಿಗಳು ನಾಗರಿಕ ಸೇವಾ ಪರೀಕ್ಷೆಯಲ್ಲಿ ಮತ್ತೆ ಕಾಣಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ಹುದ್ದೆಗಳ ವಿವರ:
ಕೇಂದ್ರ ನಾಗರಿಕ ಸೇವಾ ಪರೀಕ್ಷೆ – 933 ಹುದ್ದೆಗಳು
ಭಾರತೀಯ ಅರಣ್ಯ ಸೇವಾ ಪರೀಕ್ಷೆ – 80 ಹುದ್ದೆಗಳು

ವಿದ್ಯಾರ್ಹತೆ
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು. ಅರಣ್ಯ ಸೇವೆ ಪರೀಕ್ಷೆ ತೆಗೆದುಕೊಳ್ಳಲು ಬಯಸುವ ಅಭ್ಯರ್ಥಿ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ವಿಜ್ಞಾನ, ಸಸ್ಯಶಾಸ್ತ್ರ, ರಸಾಯನಶಾಸ್ತ್ರ, ಭೂವಿಜ್ಞಾನ, ಗಣಿತ, ಭೌತಶಾಸ್ತ್ರ, ಕೃಷಿ ಪದವಿ, ಅರಣ್ಯಶಾಸ್ತ್ರ ಪದವಿಯಲ್ಲಿ ಒಂದು ವಿಷಯವಾಗಿ ಅಭ್ಯಾಸ ಮಾಡಿರಬೇಕು.

ವಯೋಮಿತಿ
ಕನಿಷ್ಠ 21 ವರ್ಷ, ಗರಿಷ್ಟ 32 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಸಮುದಾಯದ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಸಲ್ಲಿಕೆ, ಶುಲ್ಕ
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಮಹಿಳಾ, ಪ.ಜಾ, ಪ.ಪಂ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಇದೆ. ಇತರ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕ ನಿಗದಿ ಪಡಿಸಲಾಗಿದೆ.

ಫೆ.4ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ
ಫೆ.24 ಅರ್ಜಿ ಸಲ್ಲಿಕೆಗೆ ಕೊನೆಯ ದಿನ
ಮೇ24 ರಂದು ಪರೀಕ್ಷೆ

ಯುಪಿಎಸ್‌ಸಿ ಹೊಸ ನಿಯಮಗಳು
* ಹಿಂದಿನ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಐಎಎಸ್- ಐಎಫ್‌ಎಸ್‌ಗೆ ನೇಮಕಗೊಂಡವರು 2026ರ ಪರೀಕ್ಷೆಗೆ ಅರ್ಹರಾಗಿರುವುದಿಲ್ಲ
* ಹಿಂದಿನ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಐಪಿಎಸ್‌ಗೆ ಆಯ್ಕೆಯಾದ ಅಥವಾ ನೇಮಕಗೊಂಡ ಅಭ್ಯರ್ಥಿಯು ಸಿಎಸ್‌ಇಫ್ 2026 ರ ಫಲಿತಾಂಶದ ಆಧಾರದ ಮೇಲೆ ಭಾರತೀಯ ಪೊಲೀಸ್ ಸೇವೆಯನ್ನು ಆಯ್ಕೆ ಮಾಡಲು ಅಥವಾ ಹಂಚಿಕೆ ಮಾಡಲು ಅರ್ಹರಾಗಿರುವುದಿಲ್ಲ.
* ಈ ಷರತ್ತು ಪೂರೈಸಿದರೆ ಮಾತ್ರ ಮರು ಪರೀಕ್ಷೆಗೆ ಅವಕಾಶ: ಯುಪಿಎಸ್‌ಸಿಯ ಸಿಎಸ್‌ಇ-2026 ಮೂಲಕ ಐಪಿಎಸ್ ಅಥವಾ ಕೇಂದ್ರ ಸೇವೆಗಳ ಗುಂಪು ‘ಎ’ ಹುದ್ದೆಗೆ ಹಂಚಿಕೆಯಾದ ಅಭ್ಯರ್ಥಿಗಳಿಗೆ ಕೆಲವು ಸಡಿಲಿಕೆಗಳನ್ನು ನೀಡಿದೆ. ಅಂತಹ ಅಭ್ಯರ್ಥಿಗಳು ಅರ್ಹತಾ ಷರತ್ತುಗಳನ್ನು ಪೂರೈಸಿದರೆ ಮತ್ತು ಸಂಬಂಧಪಟ್ಟ ಪ್ರಾಧಿಕಾರದಿಂದ ತರಬೇತಿಗೆ ಸೇರುವುದರಿಂದ ವಿನಾಯಿತಿ ಪಡೆದರೆ, 2027ರ ನಾಗರಿಕ ಸೇವೆಗಳ ಪರೀಕ್ಷೆಗೆ ಹಾಜರಾಗಲು ಅವರಿಗೆ ಅವಕಾಶ ನೀಡಲಾಗುವುದು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಬಿ ಜಿ ರಾಮ್ ಜಿ ಗೊಂದಲ ನಿವಾರಣೆ ಕೇಂದ್ರದ ಹೊಣೆ

ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…

7 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಿಎಂ ಶಿಶಿರ್ ಚಂದ್ರ ಏಕೆ ಕೆಳಗಿಳಿಯುತ್ತಿಲ್ಲ?

ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ  ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…

7 hours ago

ರಂಗನತಿಟ್ಟು ಸಮೀಪ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಪರ-ವಿರೋಧ ಅಭಿಪ್ರಾಯ

ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ ೨೭೫ರ ವಿಸ್ತೃತ ಮಾರ್ಗವಾದ…

7 hours ago

ಅಳಿವಿನತ್ತ ರಾಜ್ಯದ ಮೊದಲ ಬಾಲಕಿಯರ ಶಾಲೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…

7 hours ago

2ನೇ ಮದುವೆಗೆ ಸಜ್ಜಾಗಿದ್ದ ವರ : ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ ಮೊದಲ ಹೆಂಡತಿ!

ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…

12 hours ago