ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ (ನರೇಗಾ) ರಾಜ್ಯಕ್ಕೆ ಕೇಂದ್ರ ಸರ್ಕಾರ ಕೊಡಬೇಕಾದ 960 ಕೋಟಿ ಅನುದಾನ ಬಾಕಿ ಉಳಿಸಿಕೊಂಡಿದೆ.
ಕೇಂದ್ರದಿಂದ ಬಿಡುಗಡೆಯಾದ ಅನುದಾನದಲ್ಲಿ ಶೇ 75ರಷ್ಟು ವೆಚ್ಚವಾದ ಬಳಿಕ ರಾಜ್ಯ ಸರ್ಕಾರ ಕೇಂಧ್ರಕ್ಕೆ ಹಣ ಬಳಕೆ ಪ್ರಮಾಣಪತ್ರ ಸಲ್ಲಿಸುತ್ತದೆ. 960ಕೋಟಿ ಹಣ ಬಳಕೆ ಪ್ರಮಾಣ ಪತ್ರ ಸಲ್ಲಿಸಿದ್ದರೂ ಅನುದಾನ ಬಿಡುಗಡೆ ಯಾಗಿಲ್ಲ. ಶೀಘ್ರ ಅನುದಾನ ಬಿಡಿಗಡೆ ಮಾಡುವಂತೆ ಒತ್ತಾಯಿಸಿ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ಇಲಾಖೆಯು ಕೇಂದ್ರಕ್ಕೆ ಪತ್ರ ಬರೆದಿದೆ.
ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಕಾರ್ಮಿಕರಿಗೆ ಕೂಲಿ ನೀಡಲು 11,553 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಅದರಲ್ಲಿ ಕೇಂದ್ರ ಸರ್ಕಾರವು 4,987 ಕೋಟಿ ಹಾಗೂ ರಾಜ್ಯ ಸರ್ಕರವು 1,311 ಕೋಟಿ ಭರಿಸಿವೆ.
2022-23 ರಲ್ಲಿ 12.57 ಕೋಟಿ ಹಾಗೂ 2023-24 ರಲ್ಲಿ 13.84 ಕೋಟಿ ಮಾನವ ಕೂಲಿ ದಿನಗಳನ್ನು ಸೃಜಿಸಲಾಗಿತ್ತು. ಈ ಸಾಲಿನಲ್ಲಿ 11.68 ಕೋಟಿ ಕೂಲಿ ದಿನಗಳನ್ನು ಸೃಜಿಸಲಾಗಿದೆ.
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…