ನವದೆಹಲಿ: ಈ ಬಾರಿಯ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಅಧಿಕಾರಕ್ಕೆ ಬಂದರೆ ದೆಹಲಿಯ ಕೊಳಗೇರಿಯಲ್ಲಿ ವಾಸಿಸುವ ಜನರಿಗೆ ಕೇವಲ ಐದು ರೂಪಾಯಿಗಳಲ್ಲಿ ಪೌಷ್ಠಿಕಾಂಶ ಭರಿತ ಊಟ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.
ದೆಹಲಿಯ ಆರ್.ಕೆ. ಪುರಂನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಈ ಬಾರಿ ಬಿಜೆಪಿಯನ್ನು ನೀವುಗಳು ಅಧಿಕಾರಕ್ಕೆ ತಂದರೆ ಯಾವುದೇ ಒಂದು ಕೊಳಗೇರಿಯನ್ನು ಕೆಡುವುದಿಲ್ಲ ಹಾಗೂ ಕಲ್ಯಾಣ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.
ಈ ಮೂಲಕ ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರ ನೀಡಿದ್ದ ಹೇಳಿಕೆಗಳನ್ನು ಅಲ್ಲೆಗೆಳೆದಿದ್ದಾರೆ.
ಆಟೋ ಚಾಲಕರು ಮತ್ತು ಮನೆಗೆಲಸದ ಕಾರ್ಮಿಕರಿಗೆ ಕಲ್ಯಾಣ ಮಂಡಳಿ ಸ್ಥಾಪಿಸಿ, ಅವರಿಗೆ ರೂ. 10 ಲಕ್ಷವರೆಗೆ ವಿಮಾ ರಕ್ಷಣೆ ನೀಡಲಾಗುವುದು. ಮಕ್ಕಳ ಶಾಲಾ ಶುಲ್ಕಕ್ಕೆ ನೆರವು ನೀಡಲಿದೆ. ಎಎಪಿ ಜನರಿಗೆ ಇಲ್ಲಸಲ್ಲದ ಸುಳ್ಳನ್ನು ಹರಡುತ್ತಿದೆ. ಆದರೆ , ದೆಹಲಿಯ ಯಾವುದೇ ಕೊಳಗೇರಿಯನ್ನು ಕೆಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಬೆಂಗಳೂರು : ಕರ್ನಾಟಕ ರಸ್ತೆ ಸಾರಿಗೆ ನಿಗಮವು ವಾರಾಂತ್ಯದ ದಿನಗಳಲ್ಲಿ ಬೆಂಗಳೂರಿನಿಂದ ವಿವಿಧ ಪ್ರವಾಸಿ, ಯಾತ್ರಾ ಸ್ಥಳಗಳಿಗೆ ಪ್ಯಾಕೇಜ್ ಟೂರ್…
ಕೊಲಂಬೋ : ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಭಾನುವಾರ (ಫೆ.15) ಸಂಜೆ ನಡೆಯುವ ರಣರೋಚಕ ಪಂದ್ಯಕ್ಕೆ ಜಗತ್ತಿನಾದ್ಯಂತ ಕ್ರಿಕೆಟ್…
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…