ದೇಶ- ವಿದೇಶ

ನವೆಂಬರ್.‌19 ಅಥವಾ 20ರಂದು ಬಿಹಾರದಲ್ಲಿ ಅಧಿಕೃತ ಸರ್ಕಾರ ರಚನೆ

ಪಾಟ್ನಾ: ಪ್ರಚಂಡ ಬಹುಮತ ಪಡೆದು ಪ್ರತಿಪಕ್ಷಗಳನ್ನು ಧೂಳೀಪಟ ಮಾಡಿ ಅಧಿಕಾರಕ್ಕೆ ಬಂದಿರುವ ಎನ್‍ಡಿಎ ಬಿಹಾರದಲ್ಲಿ ನವೆಂಬರ್.19 ಇಲ್ಲವೇ 20ರಂದು ಅಧಿಕೃತವಾಗಿ ಸರ್ಕಾರ ರಚನೆ ಮಾಡಲಿದೆ. ‌

ಪ್ರಧಾನಿ ನರೇಂದ್ರ ಮೋದಿ ಅವರ ಅಂತಿಮ ವೇಳಾಪಟ್ಟಿಯನ್ನು ಅವಲಂಬಿಸಿ, ನವೆಂಬರ್ 19 ಅಥವಾ 20 ರಂದು ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ನಿರೀಕ್ಷೆಯಿದೆ. ಪಾಟ್ನಾ ಗಾಂಧಿ ಮೈದಾನದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಈ ಸಮಾರಂಭದಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸುವ ಸಾಧ್ಯತೆಯಿದೆ.

ಚುನಾವಣಾ ಆಯೋಗವು 18ನೇ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರಿಗೆ ಸಲ್ಲಿಸಿದೆ. ಇದರ ನಂತರ, ಹೊಸ ವಿಧಾನಸಭೆಯನ್ನು ರಚಿಸುವ ಅಧಿಸೂಚನೆ ಹೊರಡಿಸಲಾಗುವುದು. ಇದರೊಂದಿಗೆ, ಮಾದರಿ ನೀತಿ ಸಂಹಿತೆಯೂ ಅಧಿಕೃತವಾಗಿ ಅಂತ್ಯಗೊಳ್ಳಲಿದೆ.

ನಿತೀಶ್‍ಕುಮಾರ್ ರಾಜೀನಾಮೆ ನೀಡಿದ ನಂತರ ಶಾಸಕಾಂಗ ಸಭೆ ನಡೆಯಲಿದ್ದು, ಅಲ್ಲಿ ಎಲ್ಲಾ ಶಾಸಕರು ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಿದ್ದು, ಬಳಿಕ ಮತ್ತೊಮ್ಮೆ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

ಇದನ್ನು ಓದಿ: ಬಿಹಾರ ಚುನಾವಣೆಯಲ್ಲಿ ಎನ್‌ಡಿಎಗೆ ಭರ್ಜರಿ ಗೆಲುವು: ಸಂಸದ ಯದುವೀರ್‌ ಸಂತಸ

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ಸಂಪುಟ ಸಭೆ ಕರೆದಿದ್ದು, ಹಾಲಿ 17ನೇ ವಿಧಾನಸಭೆಯನ್ನು ವಿಸರ್ಜಿಸಲು ಅನುಮೋದನೆ ಪಡೆಯಲಿದ್ದಾರೆ. ಬಳಿಕ ಅವರು ರಾಜಭವನಕ್ಕೆ ಭೇಟಿ ನೀಡಿ ತಮ್ಮ ರಾಜೀನಾಮೆಯನ್ನು ಸಲ್ಲಿಸುವ ನಿರೀಕ್ಷೆಯಿದೆ.

ಅವರು ಅಧಿಕಾರದಿಂದ ಕೆಳಗಿಳಿದ ನಂತರ, ಎನ್‍ಡಿಎ ಪಕ್ಷಗಳು ತಮ್ಮ ಶಾಸಕಾಂಗ ಪಕ್ಷದ ಸಭೆಗಳನ್ನು ನಡೆಸಿ, ಮೈತ್ರಿಕೂಟದ ಮುಂದಿನ ನಾಯಕನನ್ನು ಆಯ್ಕೆ ಮಾಡಲಿವೆ. ನಂತರ, ಆಯ್ಕೆಯಾದ ನಾಯಕ ರಾಜ್ಯಪಾಲರ ಮುಂದೆ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

ಈ ನಡುವೆ, 18ನೇ ಬಿಹಾರ ವಿಧಾನಸಭೆಯಲ್ಲಿ ಎನ್‌ಡಿಎ ಸ್ಪಷ್ಟ ಬಹುಮತ ಗಳಿಸಿದೆ. ಬಿಜೆಪಿ 89 ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ನಿತೀಶ್ ಕುಮಾರ್ ಅವರ ಜನತಾ ದಳ 85 ಸ್ಥಾನಗಳನ್ನು ಪಡೆದು ಎರಡನೇ ಸ್ಥಾನದಲ್ಲಿದೆ. ಎಲ್‍ಜೆಪಿ 19 ಸ್ಥಾನ, ಎಚ್.ಎ.ಎಂ 5 ಸ್ಥಾನ, ಮತ್ತು ರಾಷ್ಟ್ರೀಯ ಲೋಕ ಮೋರ್ಚಾ 4 ಸ್ಥಾನಗಳನ್ನು ಗೆದ್ದಿವೆ. ಮಹಾಘಟಬಂಧನ್ ಕೇವಲ 35 ಸ್ಥಾನಗಳನ್ನು ಮಾತ್ರ ಪಡೆಯಲು ಶಕ್ತವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಂತಿಮ ವೇಳಾಪಟ್ಟಿಯನ್ನು ಅವಲಂಬಿಸಿ, ನವೆಂಬರ್ 19 ಅಥವಾ 20 ರಂದು ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

27 seconds ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

14 mins ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

20 mins ago

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

3 hours ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

3 hours ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

3 hours ago