ದೇಶ- ವಿದೇಶ

ನವೆಂಬರ್.‌19 ಅಥವಾ 20ರಂದು ಬಿಹಾರದಲ್ಲಿ ಅಧಿಕೃತ ಸರ್ಕಾರ ರಚನೆ

ಪಾಟ್ನಾ: ಪ್ರಚಂಡ ಬಹುಮತ ಪಡೆದು ಪ್ರತಿಪಕ್ಷಗಳನ್ನು ಧೂಳೀಪಟ ಮಾಡಿ ಅಧಿಕಾರಕ್ಕೆ ಬಂದಿರುವ ಎನ್‍ಡಿಎ ಬಿಹಾರದಲ್ಲಿ ನವೆಂಬರ್.19 ಇಲ್ಲವೇ 20ರಂದು ಅಧಿಕೃತವಾಗಿ ಸರ್ಕಾರ ರಚನೆ ಮಾಡಲಿದೆ. ‌

ಪ್ರಧಾನಿ ನರೇಂದ್ರ ಮೋದಿ ಅವರ ಅಂತಿಮ ವೇಳಾಪಟ್ಟಿಯನ್ನು ಅವಲಂಬಿಸಿ, ನವೆಂಬರ್ 19 ಅಥವಾ 20 ರಂದು ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ನಿರೀಕ್ಷೆಯಿದೆ. ಪಾಟ್ನಾ ಗಾಂಧಿ ಮೈದಾನದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಈ ಸಮಾರಂಭದಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸುವ ಸಾಧ್ಯತೆಯಿದೆ.

ಚುನಾವಣಾ ಆಯೋಗವು 18ನೇ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರಿಗೆ ಸಲ್ಲಿಸಿದೆ. ಇದರ ನಂತರ, ಹೊಸ ವಿಧಾನಸಭೆಯನ್ನು ರಚಿಸುವ ಅಧಿಸೂಚನೆ ಹೊರಡಿಸಲಾಗುವುದು. ಇದರೊಂದಿಗೆ, ಮಾದರಿ ನೀತಿ ಸಂಹಿತೆಯೂ ಅಧಿಕೃತವಾಗಿ ಅಂತ್ಯಗೊಳ್ಳಲಿದೆ.

ನಿತೀಶ್‍ಕುಮಾರ್ ರಾಜೀನಾಮೆ ನೀಡಿದ ನಂತರ ಶಾಸಕಾಂಗ ಸಭೆ ನಡೆಯಲಿದ್ದು, ಅಲ್ಲಿ ಎಲ್ಲಾ ಶಾಸಕರು ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಿದ್ದು, ಬಳಿಕ ಮತ್ತೊಮ್ಮೆ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

ಇದನ್ನು ಓದಿ: ಬಿಹಾರ ಚುನಾವಣೆಯಲ್ಲಿ ಎನ್‌ಡಿಎಗೆ ಭರ್ಜರಿ ಗೆಲುವು: ಸಂಸದ ಯದುವೀರ್‌ ಸಂತಸ

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ಸಂಪುಟ ಸಭೆ ಕರೆದಿದ್ದು, ಹಾಲಿ 17ನೇ ವಿಧಾನಸಭೆಯನ್ನು ವಿಸರ್ಜಿಸಲು ಅನುಮೋದನೆ ಪಡೆಯಲಿದ್ದಾರೆ. ಬಳಿಕ ಅವರು ರಾಜಭವನಕ್ಕೆ ಭೇಟಿ ನೀಡಿ ತಮ್ಮ ರಾಜೀನಾಮೆಯನ್ನು ಸಲ್ಲಿಸುವ ನಿರೀಕ್ಷೆಯಿದೆ.

ಅವರು ಅಧಿಕಾರದಿಂದ ಕೆಳಗಿಳಿದ ನಂತರ, ಎನ್‍ಡಿಎ ಪಕ್ಷಗಳು ತಮ್ಮ ಶಾಸಕಾಂಗ ಪಕ್ಷದ ಸಭೆಗಳನ್ನು ನಡೆಸಿ, ಮೈತ್ರಿಕೂಟದ ಮುಂದಿನ ನಾಯಕನನ್ನು ಆಯ್ಕೆ ಮಾಡಲಿವೆ. ನಂತರ, ಆಯ್ಕೆಯಾದ ನಾಯಕ ರಾಜ್ಯಪಾಲರ ಮುಂದೆ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

ಈ ನಡುವೆ, 18ನೇ ಬಿಹಾರ ವಿಧಾನಸಭೆಯಲ್ಲಿ ಎನ್‌ಡಿಎ ಸ್ಪಷ್ಟ ಬಹುಮತ ಗಳಿಸಿದೆ. ಬಿಜೆಪಿ 89 ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ನಿತೀಶ್ ಕುಮಾರ್ ಅವರ ಜನತಾ ದಳ 85 ಸ್ಥಾನಗಳನ್ನು ಪಡೆದು ಎರಡನೇ ಸ್ಥಾನದಲ್ಲಿದೆ. ಎಲ್‍ಜೆಪಿ 19 ಸ್ಥಾನ, ಎಚ್.ಎ.ಎಂ 5 ಸ್ಥಾನ, ಮತ್ತು ರಾಷ್ಟ್ರೀಯ ಲೋಕ ಮೋರ್ಚಾ 4 ಸ್ಥಾನಗಳನ್ನು ಗೆದ್ದಿವೆ. ಮಹಾಘಟಬಂಧನ್ ಕೇವಲ 35 ಸ್ಥಾನಗಳನ್ನು ಮಾತ್ರ ಪಡೆಯಲು ಶಕ್ತವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಂತಿಮ ವೇಳಾಪಟ್ಟಿಯನ್ನು ಅವಲಂಬಿಸಿ, ನವೆಂಬರ್ 19 ಅಥವಾ 20 ರಂದು ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಆಂದೋಲನ ಡೆಸ್ಕ್

Recent Posts

ಕೊಡಗಿನಲ್ಲಿ ಹೆಚ್‌ಪಿವಿ ಲಸಿಕೆ ಪಡೆಯಲು ಹಿಂದೇಟು

ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…

2 hours ago

ರಾಷ್ಟ್ರೀಯ ಕೆಟಲ್‌ಬಾಲ್ ಟೂರ್ನಿಯಲ್ಲಿ ಮಿಂಚಿದ ಪ್ರತಿಭೆಗಳು

ಹೇಮಂತ್‌ಕುಮಾರ್ ೧೦ ಚಿನ್ನ, ೬ ಬೆಳ್ಳಿ, ೩ ಕಂಚಿನ ಪದಕಗಳನ್ನು ಬಾಚಿದ ಆಕ್ಸ್‌ಫರ್ಡ್ ಅಕಾಡೆಮಿ ಮಂಡ್ಯ: ಪರಿಶ್ರಮವಿದ್ದೆಡೆ ಸಾಧನೆ ಸಾಧ್ಯ ಎಂಬುದಕ್ಕೆ ಶ್ರೀರಂಗಪಟ್ಟಣ…

2 hours ago

ಮುಸುಕಿನ ಜೋಳಕ್ಕೆ ರೋಗ ಬಾಧೆ; ಸಂಕಷ್ಟಕ್ಕೆ ಸಿಲುಕಿದ ರೈತರು

ಮಂಜು ಕೋಟೆ ಕೋಟೆ: ಔಷಧ ಸಿಂಪಡಿಸಿದ ಬಿತ್ತನೆ ಬೀಜ ವಿತರಿಸಿದರೂ ಪ್ರಯೋಜನವಾಗದೆ ಲಕ್ಷಾಂತರ ರೂ. ನಷ್ಟ  ಎಚ್.ಡಿ.ಕೋಟೆ: ಸಾವಿರಾರು ಎಕರೆಯಲ್ಲಿ…

2 hours ago

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

11 hours ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

13 hours ago