ನವದೆಹಲಿ: ಲೋಕಸಭಾ ಚುನಾವಣೆ ವೇಳೆ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದ “ಒಂದು ದೇಶ ಒಂದು ಚುನಾವಣೆʼ ಮಸೂದೆ”ಯನ್ನು ಇಂದು ಲೋಕಸಭೆಯಲ್ಲಿ ಮಂಡಿಸಲಾಯಿತು.
ಲೋಕಸಭೆ ಕಲಾಪದಲ್ಲಿಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು, ಸಂವಿಧಾನ(121ನೇ ತಿದ್ದುಪಡಿ) ಮಸೂದೆ, ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳ ಮಸೂದೆ 2024ನ್ನು ಮಂಡಿಸಿದರು. ಈ ಮಸೂದೆಗೆ ಪ್ರತಿಪಕ್ಷಗಳಿಂದ ವಿರೋಧ ವ್ಯಕ್ತವಾದ ಕಾರಣ ಇನ್ನಷ್ಟು ಅಧ್ಯಯನ ಮಾಡಲು ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ ಶಿಫಾರಸ್ಸು ಮಾಡಲಾಯಿತು.
ಸಂಸತ್ನಲ್ಲಿ ಮಸೂದೆ ಮಂಡನೆಯಾಗುತ್ತಿದ್ದಂತೆ ಇಂಡಿಯಾ ಒಕ್ಕೂಟದ ಸದಸ್ಯರು ಭಾರೀ ವಿರೋಧ ವ್ಯಕ್ತಪಡಿಸಿ, ಎನ್ಡಿಎ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಸಂಸದ ಮನೀಶ್ ತಿವಾರಿ, ಈ ಮಸೂದೆಯೂ ಭಾರತದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುತ್ತದೆ. ಕೇಂದ್ರ ಹಾಗೂ ರಾಜ್ಯಗಳನ್ನು ಏಕಕಾಲದಲ್ಲಿ ಒಟ್ಟಿಗೆ ಮಾಡಲು ಹೇಗೆ ಸಾಧ್ಯ? ಇದು ರಾಜ್ಯದ ಹಕ್ಕುಗಳನ್ನು ಕಿತ್ತುಕೊಳ್ಳುತ್ತದೆ ಎಂದು ಕಿಡಿಕಾರಿದರು.
ಇನ್ನು ಎಸ್ಪಿ ಸಂಸದ ಧರ್ಮೇಂದ್ರ ಯಾದವ್ ಕೂಡ ವಿರೋಧಿಸಿ, ಎಂಟು ವಿಧಾನಸಭೆ ಕ್ಷೇತ್ರಗಳ ವಿಧಾನಸಭೆ ಚುನಾವಣೆಯನ್ನು ಒಟ್ಟಿಗೆ ಮಾಡಲು ನಿಮಗೆ ಸಾಧ್ಯವಾಗಲಿಲ್ಲ. ಈಗ ಇಡೀ ದೇಶದಲ್ಲಿ ಚುನಾವಣೆಯನ್ನು ಒಟ್ಟಿಗೆ ಮಾಡುತ್ತೇವೆ ಎಂದು ಹೇಳುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಪಕ್ಷಗಳ ಆರೋಪಕ್ಕೆ ಉತ್ತರಿಸಿದ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್, ಈ ಮಸೂದೆ ಜಾರಿಯಿಂದ ದೇಶದ ಒಕ್ಕೂಟ ವ್ಯವಸ್ಥೆಗೆ ಯಾವುದೇ ಧಕ್ಕೆಯಾಗುವುದಿಲ್ಲ. ಭಾರತ್ ಒಕ್ಕೂಟ ವ್ಯವಸ್ಥೆಯಿಂದ ರಾಜ್ಯಗಳು ಹೊರ ಹೋಗಲು ಸಾಧ್ಯವಿಲ್ಲ ಎಂದು ಅಂಬೇಡ್ಕರ್ ಹೇಳಿದ್ದಾರೆ. ಇದು ಆಕಸ್ಮಿಕವಾಗಿ ಜಾರಿಗೆ ಬಂದಿಲ್ಲ. ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಜಾರಿಯಾಗಿರುವುದು. ಪ್ರಧಾನಿ ನರೇಂದ್ರ ಮೋದಿಯವರ ಮುಂದಾಳತ್ವದಲ್ಲಿ ಈ ಮಸೂದೆಯನ್ನು ಜಂಟಿ ಸಂಸದೀಯ ಮಸೂದೆಗೆ ನೀಡಲು ಇಚ್ಛಿಸುತ್ತೇವೆ ಎಂದು ಮಸೂದೆ ಪರ ಬ್ಯಾಟ್ ಬೀಸಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…