ದೇಶ- ವಿದೇಶ

`ಒಂದು ದೇಶ, ಒಂದು ಚುನಾವಣೆ’: ಜನರ ದಾರಿ ತಪ್ಪಿಸುವ ಕಾರ್ಯ- ಖರ್ಗೆ

ನವದೆಹಲಿ: ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇತೃತ್ವದ ಸಮಿತಿ  `ಒಂದು ದೇಶ ಒಂದು ಚುನಾವಣೆ’ ಯೋಜನೆಯ ಕಾರ್ಯ ಸಾಧ್ಯವಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಇಂದು ಕೇಂದ್ರ ಸಚಿವ ಸಂಪುಟ ಒಂದು ದೇಶ, ಒಂದು ಚುನಾವಣೆಯನ್ನು ಅಂಗೀಕಾರ ಮಾಡಿರುವ ಹಿನ್ನೆಲೆಯಲ್ಲಿ ಪತ್ರಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರ ಜನರ ಗಮನ ಸೆಳೆಯಲು ಅನೇಕ ರಾಜ್ಯಗಳಲ್ಲಿ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಇಂತಹ ಕಾರ್ಯವನ್ನು ರೂಪಿಸಿದೆ ಎಂದು ಮಲ್ಲಿಕಾರ್ಜುನ ಅವರು ಅಭಿಪ್ರಾಯಪಟ್ಟಿದ್ದಾರೆ.

2024ರ ಲೋಕಸಭೆ ಚುನಾವಣೆಯ ಘೋಷಣೆ ವೇಳೆ ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ನೇತೃತ್ವದ ಸಮಿತಿ ಒಂದು ದೇಶ, ಒಂದು ಚುನಾವಣೆ ಎಂಬ ವರದಿಯನ್ನು ಸಲ್ಲಿಸಿತ್ತು. ಆದರೆ, ಇದನ್ನು ದೇಶದಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರುವುದು ಅಸಾಧ್ಯವಾಗುತ್ತದೆ. ಬಿಜೆಪಿ ಪಕ್ಷದವರಿಗೆ ರಾಷ್ಟ್ರದಲ್ಲಿ ಯಾವುದೇ ಚುನಾವಣೆ ಎದುರಾದರೂ, ಒಂದು ವಿಚಾರವನ್ನು ಚರ್ಚೆಗೆ ಇಟ್ಟುಕೊಳ್ಳುವುದು ಬಿಜೆಪಿಯ ತಂತ್ರವಾಗಿದೆ. ಅಲ್ಲದೇ ಸಾರ್ವಜನಿಕರು ದೇಶದಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ಕಣ್ಣಮರೆಯಾಗಿಸಿ ಈ ವಿಚಾರವನ್ನೇ ಚರ್ಚೆಯಾಗುವಂತೆ ಮಾಡುತ್ತಾರೆ ಎಂದು ಖರ್ಗೆ ಅವರು ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾಂಗ್ರೆಸ್ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ…

27 mins ago

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ : ಶಾರಿಕ್‌ಗೆ 10 ವರ್ಷ ಜೈಲು

ಬೆಂಗಳೂರು : ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ನನ್ನು ದೋಷಿ…

50 mins ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪ ಪ್ರಕರಣ | ಸಿಬ್ಬಂದಿಗಳಿಂದಲೇ ಕೃತ್ಯ ; ಇಬ್ಬರ ಬಂಧನ

ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ…

1 hour ago

ಮೂರು ದಿನಗಳೊಳಗೆ ಒಪ್ಪಂದಕ್ಕೆ ಬನ್ನಿ : ಇರಾನ್‌ಗೆ ಟ್ರಂಪ್‌ ವಾರ್ನಿಂಗ್‌

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಹೊಸ ಎಚ್ಚರಿಕೆ ನೀಡಿದ್ದು, ಕದನ ವಿರಾಮವನ್ನು ಒಪ್ಪಿಕೊಳ್ಳಲು ಮೂರು…

2 hours ago

ಕೆರೆಯ ನೀರಿಗೆ ಯೂರಿಯಾ ಬೆರಕೆ ; ನೀರು ಕುಡಿದು 7 ಕುರಿಗಳು ಸಾವು

ಹನೂರು : ಜಾನುವಾರುಗಳು ಕುಡಿಯುವ ಕೆರೆಯ ನೀರಿಗೆ ಯೂರಿಯಾ ಬೆರಕೆ ಮಾಡಿದ್ದ ವಿಷಪೂರಿತ ನೀರು ಕುಡಿದು ಏಳು ಕುರಿಗಳು ಮೃತಪಟ್ಟಿರುವ…

2 hours ago

KCET 2026 | ಸಿಇಟಿ ಪರೀಕ್ಷೆಯೆ ವಿಷಯವಾರು ಕೀ ಉತ್ತರ ಪ್ರಕಟಿಸಿದ ಕೆಇಎ

ಬೆಂಗಳೂರು : ಪ್ರಸಕ್ತ-2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಎಲ್ಲ ವಿಷಯಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ…

3 hours ago