ನವದೆಹಲಿ: ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ `ಒಂದು ದೇಶ ಒಂದು ಚುನಾವಣೆ’ ಯೋಜನೆಯ ಕಾರ್ಯ ಸಾಧ್ಯವಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಇಂದು ಕೇಂದ್ರ ಸಚಿವ ಸಂಪುಟ ಒಂದು ದೇಶ, ಒಂದು ಚುನಾವಣೆಯನ್ನು ಅಂಗೀಕಾರ ಮಾಡಿರುವ ಹಿನ್ನೆಲೆಯಲ್ಲಿ ಪತ್ರಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರ ಜನರ ಗಮನ ಸೆಳೆಯಲು ಅನೇಕ ರಾಜ್ಯಗಳಲ್ಲಿ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಇಂತಹ ಕಾರ್ಯವನ್ನು ರೂಪಿಸಿದೆ ಎಂದು ಮಲ್ಲಿಕಾರ್ಜುನ ಅವರು ಅಭಿಪ್ರಾಯಪಟ್ಟಿದ್ದಾರೆ.
2024ರ ಲೋಕಸಭೆ ಚುನಾವಣೆಯ ಘೋಷಣೆ ವೇಳೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದ ಸಮಿತಿ ಒಂದು ದೇಶ, ಒಂದು ಚುನಾವಣೆ ಎಂಬ ವರದಿಯನ್ನು ಸಲ್ಲಿಸಿತ್ತು. ಆದರೆ, ಇದನ್ನು ದೇಶದಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರುವುದು ಅಸಾಧ್ಯವಾಗುತ್ತದೆ. ಬಿಜೆಪಿ ಪಕ್ಷದವರಿಗೆ ರಾಷ್ಟ್ರದಲ್ಲಿ ಯಾವುದೇ ಚುನಾವಣೆ ಎದುರಾದರೂ, ಒಂದು ವಿಚಾರವನ್ನು ಚರ್ಚೆಗೆ ಇಟ್ಟುಕೊಳ್ಳುವುದು ಬಿಜೆಪಿಯ ತಂತ್ರವಾಗಿದೆ. ಅಲ್ಲದೇ ಸಾರ್ವಜನಿಕರು ದೇಶದಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ಕಣ್ಣಮರೆಯಾಗಿಸಿ ಈ ವಿಚಾರವನ್ನೇ ಚರ್ಚೆಯಾಗುವಂತೆ ಮಾಡುತ್ತಾರೆ ಎಂದು ಖರ್ಗೆ ಅವರು ತಿಳಿಸಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…