ಗಾಜಿಯಾಬಾದ್ : ಆನ್ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶ ಗಾಜಿಯಾಬಾದ್ನಲ್ಲಿ ನಡೆದಿದೆ.
ಅಪ್ರಾಪ್ತ ಸಹೋದರಿಯರು ತಡರಾತ್ರಿ ತಾರಸಿಯಿಂದ ಕೆಳಗೆ ಹಾರಿದ್ದಾರೆ. ಅವರ ಪೋಷಕರು ಆನ್ಲೈನ್ ಗೇಮಿಂಗ್ ಆಡುವುದನ್ನು ವಿರೋಧಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಮೃತ ಬಾಲಕಿಯರನ್ನು ಪಾಖಿ (12), ಪ್ರಾಚಿ (14) ಮತ್ತು ವಿಶಿಕಾ (16) ಎಂದು ಗುರುತಿಸಲಾಗಿದೆ.
ಮೂಲಗಳ ಪ್ರಕಾರ, ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಈ ಮೂವರು ಆನ್ಲೈನ್ ವಿಡಿಯೋ ಗೇಮ್ಗಳಿಗೆ ವ್ಯಸನಿಯಾಗಿದ್ದರು ಎಂದು ವರದಿಯಾಗಿದೆ. ಅವರು ಆನ್ಲೈನ್, ಟಾಸ್ಕ್ ಆಧಾರಿತ ಕೊರಿಯನ್ ಲವ್ ಗೇಮ್ ಆಡುತ್ತಿದ್ದರು. ವರದಿಯಲ್ಲಿ ಉಲ್ಲೇಖಿಸಿರುವ ಪ್ರಕಾರ, ವ್ಯಸನವು ಎಷ್ಟರ ಮಟ್ಟಿಗೆ ತಲುಪಿತ್ತೆಂದರೆ, ಹುಡುಗಿಯರು ಶಾಲೆಗೆ ಹೋಗುವುದನ್ನು ನಿಲ್ಲಿಸಿ, ಹೆಚ್ಚಿನ ಸಮಯವನ್ನು ಆಟದಲ್ಲಿ ಕಳೆಯುತ್ತಿದ್ದರು ಎಂದು ವರದಿಯಾಗಿದೆ.
ಬೆಳಗಿನ ಜಾವ 2 ಗಂಟೆ ಸುಮಾರಿಗೆ ಗಾಜಿಯಾಬಾದ್ನ ವಸತಿ ಪಟ್ಟಣವಾದ ಭಾರತ್ ಸಿಟಿಯಲ್ಲಿ ಈ ಘಟನೆ ನಡೆದಿದೆ. ಬಾಲಕಿಯರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಘಟನೆಯ ಹಿಂದಿನ ನಿಖರವಾದ ಕಾರಣವನ್ನು ಕಂಡುಹಿಡಿಯಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಾವಿಗೆ ಕಾರಣವಾದ ಸಂದರ್ಭಗಳ ಬಗ್ಗೆ ತಿಳಿಯಲು ಆತ್ಮಹತ್ಯೆ ಪತ್ರ ಅಥವಾ ಡಿಜಿಟಲ್ ಪುರಾವೆಗಳು ಲಭ್ಯವಿದೆಯೇ ಎಂದು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ಸ್ಪಷ್ಟವಾಗಿಲ್ಲ.
ಹುಡುಗಿಯರು ಬಾಲ್ಕನಿಯಲ್ಲಿ ಪ್ಲಾಸ್ಟಿಕ್ ಕುರ್ಚಿಯನ್ನು ಇಟ್ಟು ಒಂಬತ್ತನೇ ಮಹಡಿಯಿಂದ ಒಬ್ಬೊಬ್ಬರಾಗಿ ಹಾರಿದ್ದಾರೆ. ಬಿದ್ದ ಕಾರಣ ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಬ್ದ ಕೇಳಿ ಜನರು ಮತ್ತು ಕುಟುಂಬ ಸದಸ್ಯರು ಬರುವ ಹೊತ್ತಿಗೆ ಎಲ್ಲವೂ ಮುಗಿದಿತ್ತು.
ಪೊಲೀಸರು ಸ್ಥಳಕ್ಕೆ ಆಗಮಿಸಿ, ಶವಗಳನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಇಂತಹ ಟಾಸ್ಕ್ ಆಧಾರಿತ ಆಟಗಳಲ್ಲಿ, ಅಪಾಯಕಾರಿ ಸವಾಲುಗಳನ್ನು ನೀಡಲಾಗುತ್ತದೆ, ಅವುಗಳನ್ನು ಪೂರ್ಣಗೊಳಿಸಲು ಅವರು ಮಾನಸಿಕವಾಗಿ ಸವಾಲು ಎದುರಿಸುತ್ತಾರೆ. ಮೂವರು ಸಹೋದರಿಯರು ಅಂತಿಮ ಟಾಸ್ಕ್ ಪೂರ್ಣಗೊಳಿಸಲು ಅಥವಾ ಆಟದ ಪ್ರಭಾವದಿಂದ ಈ ತೀವ್ರ ಹೆಜ್ಜೆ ಇಟ್ಟಿದ್ದಾರೆ ಎಂದು ಶಂಕಿಸಲಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…