ದೇಶ- ವಿದೇಶ

ಹಾರ್ಮುಜ್‌ ಜಲಸಂಧಿ ಸಂಪೂರ್ಣ ಓಪನ್‌ ಮಾಡಿ: ಇರಾನ್‌ಗೆ 48 ಗಂಟೆಗಳ ಗಡುವು ನೀಡಿದ ಟೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಹಾರ್ಮುಜ್‌ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್‌ ಮಾಡಬೇಕು ಎಂದು ಇರಾನ್‌ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಗಡುವು ನೀಡಿದ್ದಾರೆ.

ತೈಲವನ್ನು ಸಾಗಿಸುವ ಹಾರ್ಮುಜ್‌ ಜಲಸಂಧಿಯನ್ನು ಹಡಗು ಸಂಚಾರಕ್ಕಾಗಿ ಇರಾನ್‌ ಮತ್ತೆ ತೆರೆಯಬೇಕು. ಇಲ್ಲದಿದ್ದರೆ ಇರಾನ್‌ನ ವಿದ್ಯುತ್‌ ಸ್ಥಾವರಗಳನ್ನು ನಾಶಪಡಿಸುವುದಾಗಿ ಟ್ರಂಪ್‌ ಬೆದರಿಕೆ ಹಾಕಿದ್ದಾರೆ.

ಟ್ರಂಪ್‌ ಅವರ ಎಚ್ಚರಿಕೆಗೆ ಪ್ರತಿಕ್ರಿಯಿಸಿರುವ ಇರಾನ್‌ ಸೇನೆಯು, ಈ ಪ್ರದೇಶದಲ್ಲಿ ಅಮೇರಿಕಾಗೆ ಸೇರಿದ ಎಲ್ಲಾ ಇಂಧನ, ತಂತ್ರಜ್ಞಾನ ಮತ್ತು ಉಪ್ಪು ನೀರಿನ ನಿರ್ಮೂಲನಾ ಮೂಲ ಸೌಕರ್ಯಗಳನ್ನು ಟಾರ್ಗೆಟ್‌ ಮಾಡಿ ಹೊಡೆಯುವುದಾಗಿ ಬೆದರಿಕೆ ಹಾಕಿದೆ.

ಶತ್ರುಗಳು ಇರಾನ್‌ನ ಇಂಧನ ಮೂಲಸೌಕರ್ಯಗಳನ್ನು ದಾಳಿಗೆ ಗುರಿಯಾಗಿಸಿಕೊಂಡರೆ, ಅಮೇರಿಕಾ ಮತ್ತು ಈ ಪ್ರದೇಶದ ಆಡಳಿತಕ್ಕೆ ಸೇರಿದ ಎಲ್ಲಾ ಇಂಧನ, ಮಾಹಿತಿ ತಂತ್ರಜ್ಞಾನ ಮತ್ತು ಉಪ್ಪುನೀರಿನ ನಿರ್ಮೂಲನಾ ಮೂಲಸೌಕರ್ಯಗಳನ್ನು ಟಾರ್ಗೆಟ್‌ ಮಾಡಲಾಗುವುದು ಎಂದು ಇರಾನಿನ ಮಿಲಿಟರಿ ಕಾರ್ಯಾಚರಣೆಯ ಕಮಾಂಡ್‌ ಖತಮ್‌ ಅಲ್‌-ಅನ್ಬಿಯಾ ಕೌಂಟರ್‌ ಕೊಟ್ಟಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

2 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

2 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

2 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

2 hours ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

11 hours ago