ನವದೆಹಲಿ: ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುದೊಡ್ಡ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್, ಎಎಪಿ ಪಕ್ಷದ ತುಷ್ಟೀಕರಣ ರಾಜಕೀಯಕ್ಕೆ ತೆರೆ ಎಳಿದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಿಜೆಪಿಯ ಗೆಲುವಿಗೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಕಾಂಕ್ಷಿಯ ವಿಕಸಿತ ಭಾರತ, ಆತ್ಮನಿರ್ಭರ ಭಾರತ, ಅಭಿವೃದ್ಧಿಯ ಕನಸುಗಳು 27 ವರ್ಷಗಳ ನಂತರ ದೆಹಲಿಯಲ್ಲಿ ಬಿಜೆಪಿ ಪಕ್ಷ ಅಧಿಕಾರ ಬಂದಿರುವುದಕ್ಕೆ ಸಾಕ್ಷಿ. ಹಾಗೆಯೇ, ವಿರೋಧ ಪಕ್ಷಗಳ ತುಷ್ಟೀಕರಣ ರಾಜಕೀಯ ತಿರಸ್ಕರಿಸಿರುವುದಕ್ಕೆ ಈ ಫಲಿತಾಂಶ ಉತ್ತಮ ಉದಾಹರಣೆ ಎಂದು ಹೇಳಿದ್ದಾರೆ.
ದೆಹಲಿಯ ಜನರ ಆದೇಶವು ಬಲಿಷ್ಠ ನಾಯಕತ್ವ, ಆರ್ಥಿಕ ಬೆಳವಣಿಗೆ ಮತ್ತು ದೇಶದ ಅಭಿವೃದ್ದಿಯ ಯೋಜನೆಗಳಿಗೆ ಸಿಕ್ಕಿರುವ ಬೆಂಬಲ ಎಂದು ನಾನು ಭಾವಿಸುತ್ತೇನೆ. ಮಿತ್ರ ಪಕ್ಷದ ಗೆಲುವಿಗೆ ಶ್ರಮಿಸಿದ ಎಲ್ಲರಿಗೂ ನನ್ನ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…
ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…