Operation Akhal Three more terrorists killed
ಶ್ರೀನಗರ: ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರಿದಿದ್ದು, ಇಂದು ಮತ್ತೆ ಮೂವರು ಉಗ್ರರನ್ನು ಸದೆಬಡಿಯಲಾಗಿದೆ.
ಆಪರೇಷನ್ ಅಖಾಲ್ ಕಾರ್ಯಾಚರಣೆಯಲ್ಲಿ ಇಂದು ಕೂಡ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಭಾರತೀಯ ಸೇನೆ ನಿನ್ನೆ ಮೂವರು ಉಗ್ರರನ್ನು ಸದೆಬಡಿದಿತ್ತು. ಇಂದು ಸಹ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ತಿಳಿದುಬಂದಿದೆ.
ದಕ್ಷಿಣ ಕಾಶ್ಮೀರ ಕುಲ್ಗಾಮ್ ಜಿಲ್ಲೆಯ ಅಖಾಲ್ ಅರಣ್ಯ ಪ್ರದೇಶದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರಿದಿದೆ. ಜಮ್ಮು-ಕಾಶ್ಮೀರ ಪೊಲೀಸರು ಹಾಗೂ ಭಾರತೀಯ ಸೇನೆ, ಸಿಆರ್ಪಿಎಫ್ ಜಂಟಿ ತಂಡದಿಂದ ಕಾರ್ಯಾಚರಣೆ ನಡೆಸಲಾಗಿದ್ದು, ಮೂವರು ಉಗ್ರರನ್ನು ಸದೆಬಡಿಯಲಾಗಿದೆ.
ಇನ್ನು ಘಟನೆಯಲ್ಲಿ ಓರ್ವ ಯೋಧ ಗಾಯಗೊಂಡಿದ್ದು, ಅವರನ್ನು ಶ್ರೀನಗರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…