ದೇಶ- ವಿದೇಶ

ಆಪರೇಷನ್‌ ಮಹಾದೇವ : ಪಹಲ್ಗಾಮ್‌ ದಾಳಿಯ ರೂವಾರಿ ಹತ್ಯೆ

ಜಮ್ಮು ಮತ್ತು ಕಾಶ್ಮೀರ : ಭಾರತದ ಮೇಲೆ ನಡೆದ ಅತಿದೊಡ್ಡ ಭಯೋತ್ಪಾದನಾ ದಾಳಿಗಳಲ್ಲಿ ಒಂದಾದ ಕಾಶ್ಮೀರದ ಪಹಲ್ಗಾಮ್ ದಾಳಿಯ ರೂವಾರಿ ಸೇರಿದಂತೆ ಪಾಕಿಸ್ತಾನದ ಮೂವರು ಉಗ್ರರನ್ನು ಆಪರೇಷನ್‌ ಮಹಾದೇವ ಹೆಸರಿನಲ್ಲಿ ಭದ್ರತಾ ಪಡೆ ಹೊಡೆದುರುಳಿಸಿದೆ.

ಮೃತ ಉಗ್ರರನ್ನು ಮುಸಾ ಅಲಿಯಾಸ್ ಸುಲೇಮಾನ್, ಪಾಕಿಸ್ತಾನದ ಯಾಸಿರ್‌ ಹಾಗೂ ಅಬು ಹಮ್ಜಾ ಎಂದು ಗುರುತಿಸಲಾಗಿದೆ. ಉಗ್ರ ಹಸೀಮ್‌ ಅಲಿಯಾಸ್‌ ಸುಲೇಮಾನ್‌ ಏಪ್ರಿಲ್‌ 22 ರಂದು ಪಹಲ್ಗಾಮ್‌ನಲ್ಲಿ ನಡೆದಿದ್ದ ಭಯೋತ್ಪಾದಕ ದಾಳಿಕ ರೂವಾರಿಯಾಗಿದ್ದ ಎಂದ ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.

ಹರ್ವಾನ್‌ನ ಮುಲ್ನಾರ್ ಪ್ರದೇಶದಲ್ಲಿ ಆತ ಅಡಗಿದ್ದಾನೆ ಎಂಬ ಗುಪ್ತಚರ ಮಾಹಿತಿಯ ನಂತರ ಭಾರತೀಯ ಸೇನೆ, ಸಿಆರ್‌ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಆಪರೇಷನ್ ಮಹಾದೇವ್ ಕಾರ್ಯಾಚರಣೆ ನಡೆಸಿ, ಉಗ್ರರನ್ನು ಮಟ್ಟ ಹಾಕಿದ್ದಾರೆ.

ಲಿಡ್ವಾಸ್ ಪ್ರದೇಶದಲ್ಲಿ ಉಗ್ರಗಾಮಿಗಳು ಇದ್ದಾರೆ ಎಂಬ ಗುಪ್ತಚರ ಮಾಹಿತಿಯ ನಂತರ ಆಪರೇಷನ್ ಮಹಾದೇವ್ ಎಂಬ ಹೆಸರಿನ ಈ ಹೈ-ರಿಸ್ಕ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಭಾರತೀಯ ಸೇನಾ ವಿಶೇಷ ಪಡೆಗಳು ಈ ದಾಳಿಯನ್ನು ಮುನ್ನಡೆಸಿದವು. ತೀವ್ರವಾದ ಗುಂಡಿನ ಚಕಮಕಿಯ ಸಮಯದಲ್ಲಿ ಮೂಸಾ ಅವರನ್ನು ಹತ್ಯೆ ಮಾಡಲಾಯಿತು. ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದರು, ಅವರಲ್ಲಿ ಹೆಚ್ಚಿನವರು ಪ್ರವಾಸಿಗರು.

ಹಾಶಿಮ್ ಮೂಸಾ ಜೊತೆ ಮೃತರಾದ ಇನ್ನೊಬ್ಬರು ಉಗ್ರರು ಕೂಡ ಪಾಕಿಸ್ತಾನಿ ಪ್ರಜೆಗಳು ಎಂದು ಹೇಳಲಾಗಿದೆ. ಭದ್ರತಾ ಪಡೆಗಳು ಅವರ ದೇಹಗಳನ್ನು ಮತ್ತು ಅಮೆರಿಕ ನಿರ್ಮಿತ ಕಾರ್ಬೈನ್, ಎಕೆ -47 ರೈಫಲ್, 17 ರೈಫಲ್ ಗ್ರೆನೇಡ್‌ಗಳು ಮತ್ತು ಇತರ ಮಿಲಿಟರಿ ದರ್ಜೆಯ ಉಪಕರಣಗಳು ಸೇರಿದಂತೆ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳ ಸಂಗ್ರಹವನ್ನು ವಶಪಡಿಸಿಕೊಂಡಿವೆ.

ಆಂದೋಲನ ಡೆಸ್ಕ್

Recent Posts

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

1 hour ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

2 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

2 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

3 hours ago

ಪ್ರಕೃತಿ ವಿಕೋಪ ನಿರ್ವಹಣೆ: ಜಿಲ್ಲೆಗಳ ಮೇಲುಸ್ತುವಾರಿಗೆ ಸಚಿವರ ನೇಮಕ

ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಸಚಿವರಿಗೆ ವಿವಿಧ ಜಿಲ್ಲೆಗಳ ಮೇಲುಸ್ತುವಾರಿಯನ್ನು ಹಂಚಿಕೆ ಮಾಡಿ ಅಧಿಸೂಚನೆ…

4 hours ago

ವೆನಿಜುವೆಲಾ ದೇಶದಲ್ಲಿ ಕಂಡು ಕೇಳರಿಯದ ಭೀಕರ ಭೂಕಂಪ

ವೆನಿಜುವೆಲಾ: ವೆನಿಜುವೆಲಾ ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದ ಭೀಕರ ಭೂಕಂಪ ಸಂಭವಿಸಿ ಸಾವಿರಾರು ಜನ ಸಾವನ್ನಪ್ಪಿದ್ದು, ಭಾರೀ ಪ್ರಮಾಣದ ಜನರು…

4 hours ago