Mysore
35
few clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

ಈ ಬಾರಿಯ ಅಧಿವೇಶನ ಆಪರೇಷನ್‌ ಸಿಂಧೂರ್‌ ವಿಜಯೋತ್ಸವದ ಆಚರಣೆಯಾಗಿದೆ: ಪ್ರಧಾನಿ ನರೇಂದ್ರ ಮೋದಿ

operation sindoor celebration by narendra modi

ನವದೆಹಲಿ: ಮುಂಗಾರು ಸಂಸತ್‌ ಅಧಿವೇಶನವು ಆಪರೇಷನ್‌ ಸಿಂಧೂರ್‌ ವಿಜಯೋತ್ಸವದ ಆಚರಣೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಆಪರೇಷನ್‌ ಸಿಂಧೂರ್‌ ಹೆಸರಿಯಲ್ಲಿ ಭಯೋತ್ಪಾದಕರ ಅಡಗುತಾಣಗಳನ್ನು 22 ನಿಮಿಷಗಳಲ್ಲಿ ನೆಲಸಮ ಮಾಡಲಾಗಿದೆ.

ಭಾರತದಲ್ಲಿ ತಯಾರಿಸಲಾದ ಈ ಹೊಸ ರೂಪದ ಮಿಲಿಟರಿ ಶಕ್ತಿಯತ್ತ ಜಗತ್ತು ಬಹಳ ಆಕರ್ಷಿತವಾಗಿದೆ. ಇತ್ತೀಚಿನ ದಿನಗಳಲ್ಲಿ ನಾನು ಪ್ರಪಂಚದ ಜನರನ್ನು ಭೇಟಿಯಾದಾಗಲೆಲ್ಲಾ ಭಾರತದಿಂದ ತಯಾರಿಸಲ್ಪುತ್ತಿರುವ ಭಾರತದಲ್ಲಿ ತಯಾರಿಸಲ್ಪಟ್ಟ ಶಸ್ತ್ರಾಸ್ತ್ರಗಳ ಕಡೆಗೆ ಪ್ರಪಂಚದ ಆಕರ್ಷಣೆ ಹೆಚ್ಚುತ್ತಿದೆ ಎಂದು ಹೇಳಿದ್ದಾರೆ.

ಇನ್ನು ಈ ಮಳೆಗಾಲದ ಅಧಿವೇಶನವು ಆಪರೇಷನ್‌ ಸಿಂಧೂರ್‌ ವಿಜಯೋತ್ಸವದ ಆಚರಣೆಯಾಗಿದೆ. ಇಡೀ ಜಗತ್ತು ಭಾರತದ ಮಿಲಿಟರಿ ಶಕ್ತಿಯ ಬಲವನ್ನು ಕಂಡಿದೆ. ಆಪರೇಷನ್‌ ಸಿಂಧೂರ್‌ನಲ್ಲಿ ಭಾರತೀಯ ಸೇನೆಯು ನಿಗದಿಪಡಿಸಿದ ಗುರಿಯನ್ನು 100% ಸಾಧಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಇನ್ನು ಇಂದಿನಿಂದ ಸಂಸತ್‌ ಮುಂಗಾರು ಅಧಿವೇಶನ ಪ್ರಾರಂಭವಾಗಲಿದ್ದು, ಒಂದು ತಿಂಗಳ ಕಾಲ ನಡೆಯಲಿದೆ. ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ವಿಪಕ್ಷಗಳು ಮುಗಿಬೀಳುವ ಸಾಧ್ಯತೆಯಿದೆ.

Tags:
error: Content is protected !!