ದೇಶ- ವಿದೇಶ

ಈ ಬಾರಿಯ ಅಧಿವೇಶನ ಆಪರೇಷನ್‌ ಸಿಂಧೂರ್‌ ವಿಜಯೋತ್ಸವದ ಆಚರಣೆಯಾಗಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಮುಂಗಾರು ಸಂಸತ್‌ ಅಧಿವೇಶನವು ಆಪರೇಷನ್‌ ಸಿಂಧೂರ್‌ ವಿಜಯೋತ್ಸವದ ಆಚರಣೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಆಪರೇಷನ್‌ ಸಿಂಧೂರ್‌ ಹೆಸರಿಯಲ್ಲಿ ಭಯೋತ್ಪಾದಕರ ಅಡಗುತಾಣಗಳನ್ನು 22 ನಿಮಿಷಗಳಲ್ಲಿ ನೆಲಸಮ ಮಾಡಲಾಗಿದೆ.

ಭಾರತದಲ್ಲಿ ತಯಾರಿಸಲಾದ ಈ ಹೊಸ ರೂಪದ ಮಿಲಿಟರಿ ಶಕ್ತಿಯತ್ತ ಜಗತ್ತು ಬಹಳ ಆಕರ್ಷಿತವಾಗಿದೆ. ಇತ್ತೀಚಿನ ದಿನಗಳಲ್ಲಿ ನಾನು ಪ್ರಪಂಚದ ಜನರನ್ನು ಭೇಟಿಯಾದಾಗಲೆಲ್ಲಾ ಭಾರತದಿಂದ ತಯಾರಿಸಲ್ಪುತ್ತಿರುವ ಭಾರತದಲ್ಲಿ ತಯಾರಿಸಲ್ಪಟ್ಟ ಶಸ್ತ್ರಾಸ್ತ್ರಗಳ ಕಡೆಗೆ ಪ್ರಪಂಚದ ಆಕರ್ಷಣೆ ಹೆಚ್ಚುತ್ತಿದೆ ಎಂದು ಹೇಳಿದ್ದಾರೆ.

ಇನ್ನು ಈ ಮಳೆಗಾಲದ ಅಧಿವೇಶನವು ಆಪರೇಷನ್‌ ಸಿಂಧೂರ್‌ ವಿಜಯೋತ್ಸವದ ಆಚರಣೆಯಾಗಿದೆ. ಇಡೀ ಜಗತ್ತು ಭಾರತದ ಮಿಲಿಟರಿ ಶಕ್ತಿಯ ಬಲವನ್ನು ಕಂಡಿದೆ. ಆಪರೇಷನ್‌ ಸಿಂಧೂರ್‌ನಲ್ಲಿ ಭಾರತೀಯ ಸೇನೆಯು ನಿಗದಿಪಡಿಸಿದ ಗುರಿಯನ್ನು 100% ಸಾಧಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಇನ್ನು ಇಂದಿನಿಂದ ಸಂಸತ್‌ ಮುಂಗಾರು ಅಧಿವೇಶನ ಪ್ರಾರಂಭವಾಗಲಿದ್ದು, ಒಂದು ತಿಂಗಳ ಕಾಲ ನಡೆಯಲಿದೆ. ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ವಿಪಕ್ಷಗಳು ಮುಗಿಬೀಳುವ ಸಾಧ್ಯತೆಯಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

6 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

6 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

6 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

6 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

6 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

6 hours ago