ದೇಶ- ವಿದೇಶ

ಇಡೀ ದೇಶದಲ್ಲಿ ಆಪರೇಷನ್‌ ಸಿಂಧೂರ್‌ ವಿಜಯೋತ್ಸವ ಆಚರಿಸಲಾಗಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸಂಸತ್‌ ಮುಂಗಾರು ಅಧಿವೇಶನದಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರು ಆಪರೇಷನ್‌ ಸಿಂಧೂರ್‌ ಬಗ್ಗೆ ಮಾತನಾಡಿದ್ದಾರೆ.

ಆಪರೇಷನ್‌ ಸಿಂಧೂರ್‌ ಮೂಲಕ ಭಾರತೀಯ ಸೇನೆ ಶೌರ್ಯ ಪ್ರದರ್ಶಿಸಿದ್ದು, ಈ ಭಾರತದ ವಿಜಯೋತ್ಸವದ ಅಧಿವೇಶನವಾಗಿದೆ. ನನ್ನ ಮೇಲೆ ಜನರು ನಂಬಿಕೆ ಇಟ್ಟಿದ್ದಾರೆ. ದೇಶದ ಜನರು ನನಗೆ ಆಶೀರ್ವಾದ ಮಾಡಿದರು. ದೇಶದ ಜನತೆಗೆ ನಾನು ಧನ್ಯವಾದ ಹೇಳುತ್ತೇನೆ. ಧರ್ಮವನ್ನು ಕೇಳಿ ಹತ್ಯೆ ಮಾಡಿದ್ದವರಿಗೆ ತಕ್ಕ ಪಾಠ ಕಲಿಸಿದ್ದೇವೆ. ಪ್ರವಾಸಿಗರ ಹತ್ಯೆಗೆ ಕಾರಣರಾದವರನ್ನು ಮಟ್ಟ ಹಾಕಿದ್ದೇವೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಯಾರು ಭಾರತದ ಪರ ವಹಿಸುವುದಿಲ್ಲವೋ ಅವರಿಗೆ ಚೀನಾ ಕಾಣಿಸುತ್ತದೆ ಎಂದು ವಿಪಕ್ಷಗಳಿಗೆ ಟಾಂಗ್‌ ಕೊಟ್ಟರು.

ಇನ್ನು ಉಗ್ರರಿಗೆ ಕೊಟ್ಟ ಶಿಕ್ಷೆಯ ಬಗ್ಗೆ ನಮಗೆ ಹೆಮ್ಮೆಯಿದೆ. ಉಗ್ರರನ್ನು ಮಣ್ಣಲ್ಲಿ ಮಣ್ಣಾಗಿಸುತ್ತೇವೆ ಎಂದಿದ್ದೆ. ನಮ್ಮ ಸೈನಿಕರು ಅದೇ ರೀತಿ ಮಾಡಿದ್ದಾರೆ. ಪಾಕ್‌ನ ಮೂಲೆ ಮೂಲೆಯಲ್ಲಿದ್ದ ಉಗ್ರರ ನೆಲೆ ಧ್ವಂಸವಾಗಿದೆ. ಅಣ್ವಸ್ತ್ರದ ಬೆದರಿಕೆಗೆ ಭಾರತ ಹೆದರುವುದಿಲ್ಲ. ಆಪರೇಷನ್‌ ಸಿಂಧೂರ್‌ನಲ್ಲಿ ಶಕ್ತಿ ಪ್ರದರ್ಶನ ಮಾಡಿದೆ. ಆಪರೇಷನ್‌ ಸಿಂಧೂರ್‌ ಸಂಪೂರ್ಣ ಯಶಸ್ವಿಯಾಗಿದೆ. ಪಾಕಿಸ್ತಾನದ ಏರ್‌ಬೇಸ್‌ಗಳು ನಾಶವಾಗಿವೆ. ಕೇವಲ 22 ನಿಮಿಷದಲ್ಲಿ ಪಾಕ್‌ಗೆ ತಕ್ಕ ಉತ್ತರ ಕೊಟ್ಟಿದ್ದೇವೆ. ಇಡೀ ದೇಶದ ಪರವಾಗಿ ಭಾರತೀಯ ಸೇನೆಗೆ ಅಭಿನಂದನೆಗಳು ಎಂದು ಸಂತಸ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…

1 hour ago

ನಾಳೆಯಿಂದ ಬೆಳಗಾವಿಯ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ

ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…

1 hour ago

ಗೋವಾದಲ್ಲಿ 25 ಮಂದಿ ಸಜೀವ ದಹನ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್‌ ಬಳಿಯ ಅರ್ಪೊರಾದ ನೈಟ್‌ಕ್ಲಬ್‌ ಬೀರ್ಚ್‌ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…

2 hours ago

ಮೈಸೂರು| ಕಣ್ಣಿಗೆ ಕಾರದಪುಡಿ ಎರಚಿ ಹಲ್ಲೆ ಬಳಿಕ ಅಪಹರಣ

ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…

2 hours ago

ಗೋವಾದಲ್ಲಿ ಘೋರ ದುರಂತ: ಬಾಗಾ ಬೀಚ್‌ ಬಳಿ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ಅವಘಡ: 25 ಮಂದಿ ಸಜೀವ ದಹನ

ಗೋವಾ: ಇಲ್ಲಿನ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್‌…

2 hours ago

ಓದುಗರ ಪತ್ರ: ಅಮೃತ ಬೇಕರಿ ನಿಲ್ದಾಣದಲ್ಲಿ ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್‌ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…

2 hours ago