narendra modi
ನವದೆಹಲಿ: ಸಂಸತ್ ಮುಂಗಾರು ಅಧಿವೇಶನದಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರು ಆಪರೇಷನ್ ಸಿಂಧೂರ್ ಬಗ್ಗೆ ಮಾತನಾಡಿದ್ದಾರೆ.
ಆಪರೇಷನ್ ಸಿಂಧೂರ್ ಮೂಲಕ ಭಾರತೀಯ ಸೇನೆ ಶೌರ್ಯ ಪ್ರದರ್ಶಿಸಿದ್ದು, ಈ ಭಾರತದ ವಿಜಯೋತ್ಸವದ ಅಧಿವೇಶನವಾಗಿದೆ. ನನ್ನ ಮೇಲೆ ಜನರು ನಂಬಿಕೆ ಇಟ್ಟಿದ್ದಾರೆ. ದೇಶದ ಜನರು ನನಗೆ ಆಶೀರ್ವಾದ ಮಾಡಿದರು. ದೇಶದ ಜನತೆಗೆ ನಾನು ಧನ್ಯವಾದ ಹೇಳುತ್ತೇನೆ. ಧರ್ಮವನ್ನು ಕೇಳಿ ಹತ್ಯೆ ಮಾಡಿದ್ದವರಿಗೆ ತಕ್ಕ ಪಾಠ ಕಲಿಸಿದ್ದೇವೆ. ಪ್ರವಾಸಿಗರ ಹತ್ಯೆಗೆ ಕಾರಣರಾದವರನ್ನು ಮಟ್ಟ ಹಾಕಿದ್ದೇವೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಯಾರು ಭಾರತದ ಪರ ವಹಿಸುವುದಿಲ್ಲವೋ ಅವರಿಗೆ ಚೀನಾ ಕಾಣಿಸುತ್ತದೆ ಎಂದು ವಿಪಕ್ಷಗಳಿಗೆ ಟಾಂಗ್ ಕೊಟ್ಟರು.
ಇನ್ನು ಉಗ್ರರಿಗೆ ಕೊಟ್ಟ ಶಿಕ್ಷೆಯ ಬಗ್ಗೆ ನಮಗೆ ಹೆಮ್ಮೆಯಿದೆ. ಉಗ್ರರನ್ನು ಮಣ್ಣಲ್ಲಿ ಮಣ್ಣಾಗಿಸುತ್ತೇವೆ ಎಂದಿದ್ದೆ. ನಮ್ಮ ಸೈನಿಕರು ಅದೇ ರೀತಿ ಮಾಡಿದ್ದಾರೆ. ಪಾಕ್ನ ಮೂಲೆ ಮೂಲೆಯಲ್ಲಿದ್ದ ಉಗ್ರರ ನೆಲೆ ಧ್ವಂಸವಾಗಿದೆ. ಅಣ್ವಸ್ತ್ರದ ಬೆದರಿಕೆಗೆ ಭಾರತ ಹೆದರುವುದಿಲ್ಲ. ಆಪರೇಷನ್ ಸಿಂಧೂರ್ನಲ್ಲಿ ಶಕ್ತಿ ಪ್ರದರ್ಶನ ಮಾಡಿದೆ. ಆಪರೇಷನ್ ಸಿಂಧೂರ್ ಸಂಪೂರ್ಣ ಯಶಸ್ವಿಯಾಗಿದೆ. ಪಾಕಿಸ್ತಾನದ ಏರ್ಬೇಸ್ಗಳು ನಾಶವಾಗಿವೆ. ಕೇವಲ 22 ನಿಮಿಷದಲ್ಲಿ ಪಾಕ್ಗೆ ತಕ್ಕ ಉತ್ತರ ಕೊಟ್ಟಿದ್ದೇವೆ. ಇಡೀ ದೇಶದ ಪರವಾಗಿ ಭಾರತೀಯ ಸೇನೆಗೆ ಅಭಿನಂದನೆಗಳು ಎಂದು ಸಂತಸ ವ್ಯಕ್ತಪಡಿಸಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…