narendra modi
ನವದೆಹಲಿ: ಸಂಸತ್ ಮುಂಗಾರು ಅಧಿವೇಶನದಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರು ಆಪರೇಷನ್ ಸಿಂಧೂರ್ ಬಗ್ಗೆ ಮಾತನಾಡಿದ್ದಾರೆ.
ಆಪರೇಷನ್ ಸಿಂಧೂರ್ ಮೂಲಕ ಭಾರತೀಯ ಸೇನೆ ಶೌರ್ಯ ಪ್ರದರ್ಶಿಸಿದ್ದು, ಈ ಭಾರತದ ವಿಜಯೋತ್ಸವದ ಅಧಿವೇಶನವಾಗಿದೆ. ನನ್ನ ಮೇಲೆ ಜನರು ನಂಬಿಕೆ ಇಟ್ಟಿದ್ದಾರೆ. ದೇಶದ ಜನರು ನನಗೆ ಆಶೀರ್ವಾದ ಮಾಡಿದರು. ದೇಶದ ಜನತೆಗೆ ನಾನು ಧನ್ಯವಾದ ಹೇಳುತ್ತೇನೆ. ಧರ್ಮವನ್ನು ಕೇಳಿ ಹತ್ಯೆ ಮಾಡಿದ್ದವರಿಗೆ ತಕ್ಕ ಪಾಠ ಕಲಿಸಿದ್ದೇವೆ. ಪ್ರವಾಸಿಗರ ಹತ್ಯೆಗೆ ಕಾರಣರಾದವರನ್ನು ಮಟ್ಟ ಹಾಕಿದ್ದೇವೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಯಾರು ಭಾರತದ ಪರ ವಹಿಸುವುದಿಲ್ಲವೋ ಅವರಿಗೆ ಚೀನಾ ಕಾಣಿಸುತ್ತದೆ ಎಂದು ವಿಪಕ್ಷಗಳಿಗೆ ಟಾಂಗ್ ಕೊಟ್ಟರು.
ಇನ್ನು ಉಗ್ರರಿಗೆ ಕೊಟ್ಟ ಶಿಕ್ಷೆಯ ಬಗ್ಗೆ ನಮಗೆ ಹೆಮ್ಮೆಯಿದೆ. ಉಗ್ರರನ್ನು ಮಣ್ಣಲ್ಲಿ ಮಣ್ಣಾಗಿಸುತ್ತೇವೆ ಎಂದಿದ್ದೆ. ನಮ್ಮ ಸೈನಿಕರು ಅದೇ ರೀತಿ ಮಾಡಿದ್ದಾರೆ. ಪಾಕ್ನ ಮೂಲೆ ಮೂಲೆಯಲ್ಲಿದ್ದ ಉಗ್ರರ ನೆಲೆ ಧ್ವಂಸವಾಗಿದೆ. ಅಣ್ವಸ್ತ್ರದ ಬೆದರಿಕೆಗೆ ಭಾರತ ಹೆದರುವುದಿಲ್ಲ. ಆಪರೇಷನ್ ಸಿಂಧೂರ್ನಲ್ಲಿ ಶಕ್ತಿ ಪ್ರದರ್ಶನ ಮಾಡಿದೆ. ಆಪರೇಷನ್ ಸಿಂಧೂರ್ ಸಂಪೂರ್ಣ ಯಶಸ್ವಿಯಾಗಿದೆ. ಪಾಕಿಸ್ತಾನದ ಏರ್ಬೇಸ್ಗಳು ನಾಶವಾಗಿವೆ. ಕೇವಲ 22 ನಿಮಿಷದಲ್ಲಿ ಪಾಕ್ಗೆ ತಕ್ಕ ಉತ್ತರ ಕೊಟ್ಟಿದ್ದೇವೆ. ಇಡೀ ದೇಶದ ಪರವಾಗಿ ಭಾರತೀಯ ಸೇನೆಗೆ ಅಭಿನಂದನೆಗಳು ಎಂದು ಸಂತಸ ವ್ಯಕ್ತಪಡಿಸಿದರು.
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…